dinesh gundurao
ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮೊದಲ ಬಾರಿಗೆ ಪಾರದರ್ಶಕವಾಗಿ ಕೌನ್ಸಿಲಿಂಗ್ ನಡೆಸಿ 55,000 ಸಾವಿರ ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ವೈದ್ಯರ ನಿಯೋಜನೆಯನ್ನು ರದ್ದು ಮಾಡಿದ್ದು, ಹೊಸದಾಗಿ ನಿಯೋಜನೆಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಎಸ್.ಆನಂದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೊದಲ ಬಾರಿಗೆ ಯಾವುದೇ ಶಿಫಾರಸ್ಸಿಲ್ಲದೇ ಮೆರಿಟ್ ಆಧಾರದ ಮೇಲೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಕೆಲವು ಸಮಸ್ಯೆಗಳು ಆಗಿವೆ. ವರ್ಗಾವಣೆಯಾದ ಸ್ಥಾನಕ್ಕೆ ವೈದ್ಯರು ಬಂದಿಲ್ಲ. ಬಹಳಷ್ಟು ವರ್ಷಗಳಿಂದ ಬೆಂಗಳೂರಿನಲ್ಲಿ ಬೇರುಬಿಟ್ಟಿದ ವೈದ್ಯರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು.
ತಾಲ್ಲೂಕು ಆಸ್ಪತ್ರೆಗಳು 24*7 ಕಾರ್ಯನಿರ್ವಹಿಸುವಂತೆ ಮಾಡಲಾಗುವುದು. ಈ ಆಸ್ಪತ್ರೆಗಳಲ್ಲಿ ಇರುವ ತಜ್ಞ ವೈದ್ಯರ ಸಂಖ್ಯೆಯನ್ನು ದುಪ್ಪಟ್ಟು ಮಾಡಲಾಗುವುದು. ಅಂದರೆ ಇಬ್ಬರು ಅರವಳಿಕೆ, 2 ಪ್ರಯೋಗ ತಜ್ಞರು, ಇಬ್ಬರು ಮಕ್ಕಳ ವೈದ್ಯರನ್ನು ಒದಗಿಸಲಾಗುವುದು. ಪ್ರತಿ ತಾಲ್ಲೂಕು ಆಸ್ಪತ್ರೆಯೂ ಚೆನ್ನಾಗಿ ನಡೆಯಬೇಕು. ಮೇಲ್ದರ್ಜೆಗೇರಿಸಿದ ವೈದ್ಯಕೀಯ ಸಿಬ್ಬಂದಿ ಯಾವಾಗಲೂ ದೊರೆಯಬೇಕು ಎಂಬುದು ತಮ್ಮ ಉದ್ದೇಶವಾಗಿದೆ ಎಂದರು.
2011 ರಲ್ಲಿ ಜಾರಿಯಾಗಿದ್ದ ಕಾಯ್ದೆಯನ್ನು ಈ ವರ್ಷ ಜಾರಿಗೆ ತಂದು ವೈದ್ಯಕೀಯ ಸಿಬ್ಬಂದಿಯನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಕ್ರಿಟಿಕಲ್ ಹುದ್ದೆಗಳ ಭರ್ತಿಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ವಿರೋಧ ಪಕ್ಷದ ಮುಖ್ಯಸಚೇತಕ ದೊಡ್ಡಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದರು.
ಶೀಘ್ರವೇ ವೈದ್ಯರ ಕೊರತೆ ನಿವಾರಣೆ
ಕಡ್ಡಾಯ ಗ್ರಾಮೀಣ ವೈದ್ಯಕೀಯ ಸೇವೆಯಡಿ 400 ವೈದ್ಯರು ನೋಂದಣಿಯಾಗಿದ್ದು, ಶೀಘ್ರವೇ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಗುತ್ತಿಗೆ ವೈದ್ಯರ ವೇತನವನ್ನು 50-60 ಸಾವಿರ ರೂ.ಗೆ ತಜ್ಞ ವೈದ್ಯರ ವೇತನವನ್ನು 1.10-2ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ. ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದ ಸಮಯದಲ್ಲೇ ಸಿಬ್ಬಂದಿ ಹಾಗೂ ಸಲಕರಣೆಗಳಿಗೆ ಅನುದಾನ ದೊರೆಯದಿರುವುದರಿಂದ 30 ಆಸ್ಪತ್ರೆಗಳು ಮೇಲ್ದರ್ಜೆಗೇರಿಸಲಾಗಿಲ್ಲ. ಅದರ ಅಗತ್ಯತೆ ಇದೆ. ಇಂತಹ ಆಸ್ಪತ್ರೆಗಳಿಗೆ ಸಿಬ್ಬಂದಿ ಮತ್ತು ಸಲಕರಣೆ ಒದಗಿಸಲು ಸಚಿವ ಸಂಪುಟದ ಅನುಮೋದನೆ ದೊರೆತಿದ್ದು, ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ ಒಪ್ಪಿಗೆ ದೊರೆತ ನಂತರ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು.
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…