ರಾಜ್ಯ

ಕೌನ್ಸಿಲಿಂಗ್ ಮೂಲಕ 55,000 ಸಿಬ್ಬಂದಿ ವರ್ಗ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮೊದಲ ಬಾರಿಗೆ ಪಾರದರ್ಶಕವಾಗಿ ಕೌನ್ಸಿಲಿಂಗ್ ನಡೆಸಿ 55,000 ಸಾವಿರ ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ವೈದ್ಯರ ನಿಯೋಜನೆಯನ್ನು ರದ್ದು ಮಾಡಿದ್ದು, ಹೊಸದಾಗಿ ನಿಯೋಜನೆಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಎಸ್.ಆನಂದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೊದಲ ಬಾರಿಗೆ ಯಾವುದೇ ಶಿಫಾರಸ್ಸಿಲ್ಲದೇ ಮೆರಿಟ್ ಆಧಾರದ ಮೇಲೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಕೆಲವು ಸಮಸ್ಯೆಗಳು ಆಗಿವೆ. ವರ್ಗಾವಣೆಯಾದ ಸ್ಥಾನಕ್ಕೆ ವೈದ್ಯರು ಬಂದಿಲ್ಲ. ಬಹಳಷ್ಟು ವರ್ಷಗಳಿಂದ ಬೆಂಗಳೂರಿನಲ್ಲಿ ಬೇರುಬಿಟ್ಟಿದ ವೈದ್ಯರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು.

ತಾಲ್ಲೂಕು ಆಸ್ಪತ್ರೆಗಳು 24*7 ಕಾರ್ಯನಿರ್ವಹಿಸುವಂತೆ ಮಾಡಲಾಗುವುದು. ಈ ಆಸ್ಪತ್ರೆಗಳಲ್ಲಿ ಇರುವ ತಜ್ಞ ವೈದ್ಯರ ಸಂಖ್ಯೆಯನ್ನು ದುಪ್ಪಟ್ಟು ಮಾಡಲಾಗುವುದು. ಅಂದರೆ ಇಬ್ಬರು ಅರವಳಿಕೆ, 2 ಪ್ರಯೋಗ ತಜ್ಞರು, ಇಬ್ಬರು ಮಕ್ಕಳ ವೈದ್ಯರನ್ನು ಒದಗಿಸಲಾಗುವುದು. ಪ್ರತಿ ತಾಲ್ಲೂಕು ಆಸ್ಪತ್ರೆಯೂ ಚೆನ್ನಾಗಿ ನಡೆಯಬೇಕು. ಮೇಲ್ದರ್ಜೆಗೇರಿಸಿದ ವೈದ್ಯಕೀಯ ಸಿಬ್ಬಂದಿ ಯಾವಾಗಲೂ ದೊರೆಯಬೇಕು ಎಂಬುದು ತಮ್ಮ ಉದ್ದೇಶವಾಗಿದೆ ಎಂದರು.

2011 ರಲ್ಲಿ ಜಾರಿಯಾಗಿದ್ದ ಕಾಯ್ದೆಯನ್ನು ಈ ವರ್ಷ ಜಾರಿಗೆ ತಂದು ವೈದ್ಯಕೀಯ ಸಿಬ್ಬಂದಿಯನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಕ್ರಿಟಿಕಲ್ ಹುದ್ದೆಗಳ ಭರ್ತಿಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ವಿರೋಧ ಪಕ್ಷದ ಮುಖ್ಯಸಚೇತಕ ದೊಡ್ಡಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದರು.

ಶೀಘ್ರವೇ ವೈದ್ಯರ ಕೊರತೆ ನಿವಾರಣೆ
ಕಡ್ಡಾಯ ಗ್ರಾಮೀಣ ವೈದ್ಯಕೀಯ ಸೇವೆಯಡಿ 400 ವೈದ್ಯರು ನೋಂದಣಿಯಾಗಿದ್ದು, ಶೀಘ್ರವೇ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಗುತ್ತಿಗೆ ವೈದ್ಯರ ವೇತನವನ್ನು 50-60 ಸಾವಿರ ರೂ.ಗೆ ತಜ್ಞ ವೈದ್ಯರ ವೇತನವನ್ನು 1.10-2ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ. ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದ ಸಮಯದಲ್ಲೇ ಸಿಬ್ಬಂದಿ ಹಾಗೂ ಸಲಕರಣೆಗಳಿಗೆ ಅನುದಾನ ದೊರೆಯದಿರುವುದರಿಂದ 30 ಆಸ್ಪತ್ರೆಗಳು ಮೇಲ್ದರ್ಜೆಗೇರಿಸಲಾಗಿಲ್ಲ. ಅದರ ಅಗತ್ಯತೆ ಇದೆ. ಇಂತಹ ಆಸ್ಪತ್ರೆಗಳಿಗೆ ಸಿಬ್ಬಂದಿ ಮತ್ತು ಸಲಕರಣೆ ಒದಗಿಸಲು ಸಚಿವ ಸಂಪುಟದ ಅನುಮೋದನೆ ದೊರೆತಿದ್ದು, ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ ಒಪ್ಪಿಗೆ ದೊರೆತ ನಂತರ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

4 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

5 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

5 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

6 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

6 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

7 hours ago