ರಾಜ್ಯ

ತುಮಕೂರು ಜಿಲ್ಲೆ ಚಿರತೆ ಕಾರ್ಯಪಡೆಗೆ 59 ಸಿಬ್ಬಂದಿ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ತುಮಕೂರು ಜಿಲ್ಲೆ ಕುಣಿಗಲ್, ತಿಪಟೂರು, ಮಧುಗಿರಿ, ಪಾವಗಢ ಮತ್ತು ಕೊರಟಗೆರೆ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅನುಮೋದನೆ ನೀಡಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿರತೆ ಕಾರ್ಯಪಡೆ ಮುಖ್ಯಸ್ಥರಾಗಿರಲಿದ್ದು, ಪಡೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯರು, ಒಬ್ಬ ವಲಯ ಅರಣ್ಯಾಧಿಕಾರಿ, 4 ಉಪ ವಲಯ ಅರಣ್ಯಾಧಿಕಾರಿ, 8 ಗಸ್ತು ಅರಣ್ಯ ಪಾಲಕರು, 5 ವಾಹನ ಚಾಲಕರು ಹಾಗೂ ಹೊರಗುತ್ತಿಗೆಯ 40 ಸಿಬ್ಬಂದಿಯನ್ನು ನಿಯೋಜಿಸಲು ಸಚಿವರು ಅನುಮೋದನೆ ನೀಡಿದ್ದಾರೆ.

ತುಮಕೂರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ 4 ತಂಡದಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ. ಈ ಪಡೆ ಚಿರತೆ ಹಾವಳಿ ಇರುವ ಗ್ರಾಮಗಳಲ್ಲಿ ಗಸ್ತು ನಡೆಸಲಿದ್ದು, ರೈತರ ಜಮೀನು, ವಸತಿ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡರೆ ಅದರ ಸೆರೆಗೆ ತುರ್ತು ಕ್ರಮ ವಹಿಸಲಿದೆ.

ಕಾರ್ಯಪಡೆಯು ಜಿಲ್ಲಾಡಳಿತದೊಂದಿಗೆ ಸಮನ್ವಯತೆಯೊಂದಿಗೆ ಕಾರ್ಯ ನಿರ್ವಹಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡ್ರ್ಯಾಗನ್‌ ಪಾಂಡ್‌ ಉದ್ಘಾಟಿಸಿದ ಸಿಎಂ ; ಲೇಸರ್‌ನಲ್ಲಿ ಸಿದ್ಧರಾಮಯ್ಯ ಯಶೋಗಾಥೆ

ಮೈಸೂರು : ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ಭಾರತದಲ್ಲೇ ಪ್ರಥಮವಾಗಿ ನಿರ್ಮಿಸಲಾಗಿರುವ ರಾಜೀವ್ ಗಾಂಧಿ ಡ್ರಾಗನ್ ಪಾಂಡ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ದಿಲ್ಲಿ ಗಲಭೆ ಪ್ರಕರಣ | ಉಮರ್‌ ಖಾಲಿದ್‌, ಶಾರ್ಜೀಲ್‌ ಇಮಾನ್‌ ಜಾಮೀನಿಗೆ ಸುಪ್ರೀಂ ನಕಾರ

ಹೊಸದಿಲ್ಲಿ : 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಎನ್‍ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್…

10 hours ago

ದೇವರಾಜ ಅರಸು ಎಲ್ಲಿ? ಇವರೆಲ್ಲಿ? : ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಆಕ್ರೋಶ

ಬೆಂಗಳೂರು : ಸಿ.ಎಂ.ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ…

10 hours ago

ಕೋಗಿಲು ಲೇಔಟ್‌ನಲ್ಲಿ ಅಕ್ರಮ ವಲಸಿಗರು ಇದ್ದದ್ದು ನಿಜ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ಬೆಂಗಳೂರು ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ…

11 hours ago

ʻವೆಲ್ ಸ್ಪೋರ್ಟ್ಸ್ʼ ಮೂಲಕ ಹೊಸ ಅಧ್ಯಾಯ ಆರಂಭಿಸಿದ ಚಿನ್ನದ ಹುಡುಗ ʼನೀರಜ್ ಚೋಪ್ರಾʼ

ಬೆಂಗಳೂರು : ಚಿನ್ನದ ಹುಡುಗ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಮತ್ತು JSW ಸ್ಪೋರ್ಟ್ಸ್ ಸೋಮವಾರ ತಮ್ಮ ಅಧಿಕೃತ ಪಾಲುದಾರಿಕೆಯನ್ನು…

11 hours ago