ರಾಜ್ಯ

ತುಮಕೂರು ಜಿಲ್ಲೆ ಚಿರತೆ ಕಾರ್ಯಪಡೆಗೆ 59 ಸಿಬ್ಬಂದಿ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ತುಮಕೂರು ಜಿಲ್ಲೆ ಕುಣಿಗಲ್, ತಿಪಟೂರು, ಮಧುಗಿರಿ, ಪಾವಗಢ ಮತ್ತು ಕೊರಟಗೆರೆ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅನುಮೋದನೆ ನೀಡಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿರತೆ ಕಾರ್ಯಪಡೆ ಮುಖ್ಯಸ್ಥರಾಗಿರಲಿದ್ದು, ಪಡೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯರು, ಒಬ್ಬ ವಲಯ ಅರಣ್ಯಾಧಿಕಾರಿ, 4 ಉಪ ವಲಯ ಅರಣ್ಯಾಧಿಕಾರಿ, 8 ಗಸ್ತು ಅರಣ್ಯ ಪಾಲಕರು, 5 ವಾಹನ ಚಾಲಕರು ಹಾಗೂ ಹೊರಗುತ್ತಿಗೆಯ 40 ಸಿಬ್ಬಂದಿಯನ್ನು ನಿಯೋಜಿಸಲು ಸಚಿವರು ಅನುಮೋದನೆ ನೀಡಿದ್ದಾರೆ.

ತುಮಕೂರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ 4 ತಂಡದಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ. ಈ ಪಡೆ ಚಿರತೆ ಹಾವಳಿ ಇರುವ ಗ್ರಾಮಗಳಲ್ಲಿ ಗಸ್ತು ನಡೆಸಲಿದ್ದು, ರೈತರ ಜಮೀನು, ವಸತಿ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡರೆ ಅದರ ಸೆರೆಗೆ ತುರ್ತು ಕ್ರಮ ವಹಿಸಲಿದೆ.

ಕಾರ್ಯಪಡೆಯು ಜಿಲ್ಲಾಡಳಿತದೊಂದಿಗೆ ಸಮನ್ವಯತೆಯೊಂದಿಗೆ ಕಾರ್ಯ ನಿರ್ವಹಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

2 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

2 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

2 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

2 hours ago