ರಾಜ್ಯ

ತುಮಕೂರು ಜಿಲ್ಲೆ ಚಿರತೆ ಕಾರ್ಯಪಡೆಗೆ 59 ಸಿಬ್ಬಂದಿ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ತುಮಕೂರು ಜಿಲ್ಲೆ ಕುಣಿಗಲ್, ತಿಪಟೂರು, ಮಧುಗಿರಿ, ಪಾವಗಢ ಮತ್ತು ಕೊರಟಗೆರೆ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅನುಮೋದನೆ ನೀಡಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿರತೆ ಕಾರ್ಯಪಡೆ ಮುಖ್ಯಸ್ಥರಾಗಿರಲಿದ್ದು, ಪಡೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯರು, ಒಬ್ಬ ವಲಯ ಅರಣ್ಯಾಧಿಕಾರಿ, 4 ಉಪ ವಲಯ ಅರಣ್ಯಾಧಿಕಾರಿ, 8 ಗಸ್ತು ಅರಣ್ಯ ಪಾಲಕರು, 5 ವಾಹನ ಚಾಲಕರು ಹಾಗೂ ಹೊರಗುತ್ತಿಗೆಯ 40 ಸಿಬ್ಬಂದಿಯನ್ನು ನಿಯೋಜಿಸಲು ಸಚಿವರು ಅನುಮೋದನೆ ನೀಡಿದ್ದಾರೆ.

ತುಮಕೂರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ 4 ತಂಡದಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ. ಈ ಪಡೆ ಚಿರತೆ ಹಾವಳಿ ಇರುವ ಗ್ರಾಮಗಳಲ್ಲಿ ಗಸ್ತು ನಡೆಸಲಿದ್ದು, ರೈತರ ಜಮೀನು, ವಸತಿ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡರೆ ಅದರ ಸೆರೆಗೆ ತುರ್ತು ಕ್ರಮ ವಹಿಸಲಿದೆ.

ಕಾರ್ಯಪಡೆಯು ಜಿಲ್ಲಾಡಳಿತದೊಂದಿಗೆ ಸಮನ್ವಯತೆಯೊಂದಿಗೆ ಕಾರ್ಯ ನಿರ್ವಹಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago