ರಾಜ್ಯ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 60ನೇ ವಜ್ರಮಹೋತ್ಸವ : ಕೃಷಿ ಸಚಿವರ ಶ್ಲಾಘನೆ

ಬೆಂಗಳೂರು : ಬೆಂಗಳೂರು ಕೃಷಿ ವಿಶ್ವವಿದ್ಯಾಲಯ (ಯುಎಎಸ್‌ಬಿ) ತನ್ನ 60ನೇ ಸಂಸ್ಥಾಪನಾ ದಿನಾಚರಣೆಯನ್ನು ಇಂದು ವಿಜೃಂಭಣೆಯಿಂದ ಆಚರಿಸಿತು. ಆರು ದಶಕಗಳಿಂದ ಕೃಷಿ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆಯಲ್ಲಿ ದೇಶಕ್ಕೆ ಕೊಡುಗೆ ನೀಡುತ್ತಿರುವ ಈ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಅವರು ಭಾಗವಹಿಸಿ, ವಿಶ್ವವಿದ್ಯಾಲಯದ ಸಾಧನೆಗಳನ್ನು ಕೊಂಡಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಈ ಐತಿಹಾಸಿಕ ಸಂದರ್ಭದಲ್ಲಿ ಭಾಗವಹಿಸಿರುವುದು ನನಗೆ ಗೌರವ ಮತ್ತು ಸೌಭಾಗ್ಯ. ಕೃಷಿ ಕ್ಷೇತ್ರದಲ್ಲಿ ಯುಎಎಸ್‌ಬಿ ತನ್ನ ವಿಶಿಷ್ಟ ಕೊಡುಗೆಯಿಂದ ರಾಷ್ಟ್ರಕ್ಕೆ ಕೀರ್ತಿಯನ್ನು ತಂದಿದೆ,” ಎಂದು ಹೇಳಿದರು. ಹಾಗೆಯೇ, “ವಿಶ್ವವಿದ್ಯಾಲಯವು ಶಿಕ್ಷಣ, ಸಂಶೋಧನೆ ಮತ್ತು ರೈತ ಸಮುದಾಯದ ಸೇವೆಯಲ್ಲಿ ಇನ್ನಷ್ಟು ಉನ್ನತಿಯನ್ನು ಸಾಧಿಸಲಿ,” ಎಂದು ಶುಭ ಹಾರೈಸಿದರು. ಐತಿಹಾಸಿಕ ಪಯಣ 1899ರಲ್ಲಿ ಮೈಸೂರಿನ ರಾಜಪ್ರತಿನಿಧಿ ಮಹಾರಾಣಿ ಕೆಂಪನಂಜಮ್ಮಣ್ಣಿ ವಾಣಿ ವಿಲಾಸ ಸನ್ನಿಧಿಯವರು ಹೆಬ್ಬಾಳದಲ್ಲಿ 30 ಎಕರೆ ಜಮೀನು ಕೊಡುಗೆಯಾಗಿ ನೀಡಿದ್ದರಿಂದ ಈ ವಿಶ್ವವಿದ್ಯಾಲಯದ ಆರಂಭವಾಯಿತು.

1913ರಲ್ಲಿ ಸರ್ ಎಂ. ವಿಶ್ವೇಶ್ವರಯ್ಯನವರು ಮೈಸೂರು ಕೃಷಿ ವಸತಿ ಶಾಲೆ ಸ್ಥಾಪಿಸಿದರು, ಡಾ. ಲೆಸ್ಲೀ ಕೋಲ್‌ಮನ್‌ರವರನ್ನು ಮೊದಲ ಕೃಷಿ ನಿರ್ದೇಶಕರಾಗಿ ನೇಮಿಸಿದರು. 1946ರಲ್ಲಿ ಶ್ರೀ ಎಂ.ಎ. ಶ್ರೀನಿವಾಸನ್‌ರವರ ಪ್ರಯತ್ನದಿಂದ ಹೆಬ್ಬಾಳದ ಪ್ರಾಯೋಗಿಕ ಕ್ಷೇತ್ರವು ಕೃಷಿ ಕಾಲೇಜಾಗಿ ಮೇಲ್ದರ್ಜೆಗೇರಿತು. 1963ರಲ್ಲಿ ವಿಶ್ವವಿದ್ಯಾಲಯವು ಸ್ಥಾಪನೆಯಾಗಿ, 1964ರಲ್ಲಿ ಡಾ. ಕೆ.ಸಿ. ನಾಯಕ್‌ರವರು ಮೊದಲ ಕುಲಪತಿಗಳಾದರು. 1969ರಲ್ಲಿ ಶ್ರೀಮತಿ ಇಂದಿರಾಗಾಂಧಿಯವರು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣವನ್ನು ಉದ್ಘಾಟಿಸಿದರು. ಇದುವರೆಗೆ 21 ಕುಲಪತಿಗಳು ಈ ಸಂಸ್ಥೆಗೆ ಕೊಡುಗೆ ನೀಡಿದ್ದಾರೆ. ಇತ್ತೀಚಿನ ಸಾಧನೆಗಳು 2025-2030ರ ಅವಧಿಗೆ ಯುಎಎಸ್‌ಬಿ ನ್ಯಾಕ್‌ನಿಂದ A+ ಗ್ರೇಡ್ ಪಡೆದಿದೆ. 2025ರ NIRF ಶ್ರೇಯಾಂಕದಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ 11ನೇ ಸ್ಥಾನ, ಕರ್ನಾಟಕದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಮೊದಲ ಸ್ಥಾನ, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 37ನೇ ಸ್ಥಾನ ಮತ್ತು ಒಟ್ಟಾರೆ 95ನೇ ಸ್ಥಾನವನ್ನು ಗಳಿಸಿದೆ. ಸಂಶೋಧನೆಯಲ್ಲಿ 214 ಯೋಜನೆಗಳು ಕಾರ್ಯನಿರ್ವಹಿಸುತ್ತಿದ್ದು, 42 ಬಾಹ್ಯ ಅನುದಾನಿತ ಯೋಜನೆಗಳು ಸೇರಿದ್ದು, ಕಳೆದ ವರ್ಷ 240 ಕೋಟಿ ರೂ. ಅನುದಾನವನ್ನು ಪಡೆಯಲಾಗಿದೆ.

ಇದನ್ನೂ ಓದಿ:-ನಂಜನಗೂಡು | ದುಷ್ಕರ್ಮಿಗಳಿಂದ ಶಿವಲಿಂಗ, ನಂದಿ ಬಸವ ಭಗ್ನ

2024ರಲ್ಲಿ 5 ಹೊಸ ಬೆಳೆ ತಳಿಗಳು (ಜೋಳ, ಹರಳು, ಸೂರ್ಯಕಾಂತಿ, ಅರಿಶಿಣ, ಕಪ್ಪು ಅರಿಶಿಣ) ಮತ್ತು 26 ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೃಷಿ ಮೇಳ 2024 ರಲ್ಲಿ 34.13 ಲಕ್ಷ ಜನರನ್ನು ಆಕರ್ಷಿಸಿ, 6.17 ಕೋಟಿ ರೂ. ವಹಿವಾಟು ನಡೆಸಿತು. ಕೃಷಿ ಸಂತೆ, ಜೂನ್ 2024ರಿಂದ ಮಾಸಿಕ ಕಾರ್ಯಕ್ರಮವಾಗಿ 20,000ಕ್ಕೂ ಹೆಚ್ಚು ಜನರನ್ನು ಆಕರ್ಷಿಸುತ್ತಿದ್ದು, ವಹಿವಾಟು 15.50 ಲಕ್ಷ ರೂ.ಗೆ ಏರಿಕೆಯಾಗಿದೆ. ಜಿಕೆವಿಕೆ ಆವರಣದ ಪೌಷ್ಟಿಕ ಧಾನ್ಯಗಳ ಶ್ರೇಷ್ಠತಾ ಕೇಂದ್ರವು ಜೈವಿಕ ಭಾರತ ಪ್ರಶಸ್ತಿ 2025ರಲ್ಲಿ 3ನೇ ಸ್ಥಾನ ಗಳಿಸಿದೆ. ಹೆಮ್ಮೆಯ ಹಳೆ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಹಳೆವಿದ್ಯಾರ್ಥಿಗಳಾದ ಡಾ. ಎಸ್. ಅಯ್ಯಪ್ಪನ್ (ನೀಲಿ ಕ್ರಾಂತಿಯ ಶಿಲ್ಪಿ), ಡಾ. ಎಸ್. ರಾಮಸ್ವಾಮಿ (ನಾರ್ತ್‌ವೆಸ್ಟ್ ಕಮಿಷನ್ ಆನ್ ಕಾಲೇಜಸ್‌ನ ಅಧ್ಯಕ್ಷ), ಡಾ. ಕೃಷ್ಣ (ಕೋವ್ಯಾಕ್ಸಿನ್ ಸಂಶೋಧಕ), ಡಾ. ಜಿ. ಪರಮೇಶ್ವರ್ (ಗೃಹ ಸಚಿವರು), ಮತ್ತು ಡಾ. ಜೆ. ರಾಧಾಕೃಷ್ಣನ್ (ತಮಿಳುನಾಡು ಆರೋಗ್ಯ ಕಾರ್ಯದರ್ಶಿ) ರಾಷ್ಟ್ರಕ್ಕೆ ಕೀರ್ತಿಯನ್ನು ತಂದಿದ್ದಾರೆ.

ಸರ್ಕಾರದ ಕೊಡುಗೆ ಕೃಷಿ ಇಲಾಖೆಯ 43 ಪ್ರಯೋಗಾಲಯಗಳು NABL ಮಾನ್ಯತೆ ಪಡೆದ ಮೊದಲ ರಾಜ್ಯವಾಗಿದೆ, ಇದಕ್ಕಾಗಿ 6 ಕೋಟಿ ರೂ. ಅನುದಾನವನ್ನು ಕಲ್ಪಿಸಲಾಗಿದೆ. ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯಡಿ 5000 ಕಿರು ಘಟಕಗಳ ಸ್ಥಾಪನೆಗೆ 206 ಕೋಟಿ ರೂ. ಬಜೆಟ್‌ನಲ್ಲಿ ಒದಗಿಸಲಾಗಿದೆ. ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಈ ವರ್ಷ ಪ್ರವೇಶಾತಿ ಆರಂಭವಾಗಿದೆ. ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕುಲಪತಿಗಳು, ಅಧಿಕಾರಿಗಳು, ವಿಜ್ಞಾನಿಗಳು, ವಿದ್ಯಾರ್ಥಿಗಳು, ಹಳೆವಿದ್ಯಾರ್ಥಿಗಳು, ರೈತರು ಮತ್ತು ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

56 seconds ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

5 mins ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

25 mins ago

ಇಂದು ದಿ.ಎಲ್.ಜಿ.ಹಾವನೂರು ಹುಟ್ಟುಹಬ್ಬ ; ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದ ಹಾವನೂರು

ಹಾವನೂರು ಆಯೋಗದ ವರದಿಯನ್ನು ಅಂದಿನ ಮುಖ್ಯಮಂತ್ರಿ ಅರಸು ಅವರು 'ಹಿಂದುಳಿದ ವರ್ಗಗಳ ಬೈಬಲ್' ಎಂದು ಬಣ್ಣಿಸಿದರೆ, ಸರ್ವೋಚ್ಚ ನ್ಯಾಯಾಲಯವು 'ಹಿಂದುಳಿದ…

37 mins ago

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ; ಸಲೀಸಲ್ಲ ಅನುಸರಣೆ

ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…

3 hours ago

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

3 hours ago