ರಾಜ್ಯ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 60ನೇ ವಜ್ರಮಹೋತ್ಸವ : ಕೃಷಿ ಸಚಿವರ ಶ್ಲಾಘನೆ

ಬೆಂಗಳೂರು : ಬೆಂಗಳೂರು ಕೃಷಿ ವಿಶ್ವವಿದ್ಯಾಲಯ (ಯುಎಎಸ್‌ಬಿ) ತನ್ನ 60ನೇ ಸಂಸ್ಥಾಪನಾ ದಿನಾಚರಣೆಯನ್ನು ಇಂದು ವಿಜೃಂಭಣೆಯಿಂದ ಆಚರಿಸಿತು. ಆರು ದಶಕಗಳಿಂದ ಕೃಷಿ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆಯಲ್ಲಿ ದೇಶಕ್ಕೆ ಕೊಡುಗೆ ನೀಡುತ್ತಿರುವ ಈ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಅವರು ಭಾಗವಹಿಸಿ, ವಿಶ್ವವಿದ್ಯಾಲಯದ ಸಾಧನೆಗಳನ್ನು ಕೊಂಡಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಈ ಐತಿಹಾಸಿಕ ಸಂದರ್ಭದಲ್ಲಿ ಭಾಗವಹಿಸಿರುವುದು ನನಗೆ ಗೌರವ ಮತ್ತು ಸೌಭಾಗ್ಯ. ಕೃಷಿ ಕ್ಷೇತ್ರದಲ್ಲಿ ಯುಎಎಸ್‌ಬಿ ತನ್ನ ವಿಶಿಷ್ಟ ಕೊಡುಗೆಯಿಂದ ರಾಷ್ಟ್ರಕ್ಕೆ ಕೀರ್ತಿಯನ್ನು ತಂದಿದೆ,” ಎಂದು ಹೇಳಿದರು. ಹಾಗೆಯೇ, “ವಿಶ್ವವಿದ್ಯಾಲಯವು ಶಿಕ್ಷಣ, ಸಂಶೋಧನೆ ಮತ್ತು ರೈತ ಸಮುದಾಯದ ಸೇವೆಯಲ್ಲಿ ಇನ್ನಷ್ಟು ಉನ್ನತಿಯನ್ನು ಸಾಧಿಸಲಿ,” ಎಂದು ಶುಭ ಹಾರೈಸಿದರು. ಐತಿಹಾಸಿಕ ಪಯಣ 1899ರಲ್ಲಿ ಮೈಸೂರಿನ ರಾಜಪ್ರತಿನಿಧಿ ಮಹಾರಾಣಿ ಕೆಂಪನಂಜಮ್ಮಣ್ಣಿ ವಾಣಿ ವಿಲಾಸ ಸನ್ನಿಧಿಯವರು ಹೆಬ್ಬಾಳದಲ್ಲಿ 30 ಎಕರೆ ಜಮೀನು ಕೊಡುಗೆಯಾಗಿ ನೀಡಿದ್ದರಿಂದ ಈ ವಿಶ್ವವಿದ್ಯಾಲಯದ ಆರಂಭವಾಯಿತು.

1913ರಲ್ಲಿ ಸರ್ ಎಂ. ವಿಶ್ವೇಶ್ವರಯ್ಯನವರು ಮೈಸೂರು ಕೃಷಿ ವಸತಿ ಶಾಲೆ ಸ್ಥಾಪಿಸಿದರು, ಡಾ. ಲೆಸ್ಲೀ ಕೋಲ್‌ಮನ್‌ರವರನ್ನು ಮೊದಲ ಕೃಷಿ ನಿರ್ದೇಶಕರಾಗಿ ನೇಮಿಸಿದರು. 1946ರಲ್ಲಿ ಶ್ರೀ ಎಂ.ಎ. ಶ್ರೀನಿವಾಸನ್‌ರವರ ಪ್ರಯತ್ನದಿಂದ ಹೆಬ್ಬಾಳದ ಪ್ರಾಯೋಗಿಕ ಕ್ಷೇತ್ರವು ಕೃಷಿ ಕಾಲೇಜಾಗಿ ಮೇಲ್ದರ್ಜೆಗೇರಿತು. 1963ರಲ್ಲಿ ವಿಶ್ವವಿದ್ಯಾಲಯವು ಸ್ಥಾಪನೆಯಾಗಿ, 1964ರಲ್ಲಿ ಡಾ. ಕೆ.ಸಿ. ನಾಯಕ್‌ರವರು ಮೊದಲ ಕುಲಪತಿಗಳಾದರು. 1969ರಲ್ಲಿ ಶ್ರೀಮತಿ ಇಂದಿರಾಗಾಂಧಿಯವರು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣವನ್ನು ಉದ್ಘಾಟಿಸಿದರು. ಇದುವರೆಗೆ 21 ಕುಲಪತಿಗಳು ಈ ಸಂಸ್ಥೆಗೆ ಕೊಡುಗೆ ನೀಡಿದ್ದಾರೆ. ಇತ್ತೀಚಿನ ಸಾಧನೆಗಳು 2025-2030ರ ಅವಧಿಗೆ ಯುಎಎಸ್‌ಬಿ ನ್ಯಾಕ್‌ನಿಂದ A+ ಗ್ರೇಡ್ ಪಡೆದಿದೆ. 2025ರ NIRF ಶ್ರೇಯಾಂಕದಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ 11ನೇ ಸ್ಥಾನ, ಕರ್ನಾಟಕದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಮೊದಲ ಸ್ಥಾನ, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 37ನೇ ಸ್ಥಾನ ಮತ್ತು ಒಟ್ಟಾರೆ 95ನೇ ಸ್ಥಾನವನ್ನು ಗಳಿಸಿದೆ. ಸಂಶೋಧನೆಯಲ್ಲಿ 214 ಯೋಜನೆಗಳು ಕಾರ್ಯನಿರ್ವಹಿಸುತ್ತಿದ್ದು, 42 ಬಾಹ್ಯ ಅನುದಾನಿತ ಯೋಜನೆಗಳು ಸೇರಿದ್ದು, ಕಳೆದ ವರ್ಷ 240 ಕೋಟಿ ರೂ. ಅನುದಾನವನ್ನು ಪಡೆಯಲಾಗಿದೆ.

ಇದನ್ನೂ ಓದಿ:-ನಂಜನಗೂಡು | ದುಷ್ಕರ್ಮಿಗಳಿಂದ ಶಿವಲಿಂಗ, ನಂದಿ ಬಸವ ಭಗ್ನ

2024ರಲ್ಲಿ 5 ಹೊಸ ಬೆಳೆ ತಳಿಗಳು (ಜೋಳ, ಹರಳು, ಸೂರ್ಯಕಾಂತಿ, ಅರಿಶಿಣ, ಕಪ್ಪು ಅರಿಶಿಣ) ಮತ್ತು 26 ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೃಷಿ ಮೇಳ 2024 ರಲ್ಲಿ 34.13 ಲಕ್ಷ ಜನರನ್ನು ಆಕರ್ಷಿಸಿ, 6.17 ಕೋಟಿ ರೂ. ವಹಿವಾಟು ನಡೆಸಿತು. ಕೃಷಿ ಸಂತೆ, ಜೂನ್ 2024ರಿಂದ ಮಾಸಿಕ ಕಾರ್ಯಕ್ರಮವಾಗಿ 20,000ಕ್ಕೂ ಹೆಚ್ಚು ಜನರನ್ನು ಆಕರ್ಷಿಸುತ್ತಿದ್ದು, ವಹಿವಾಟು 15.50 ಲಕ್ಷ ರೂ.ಗೆ ಏರಿಕೆಯಾಗಿದೆ. ಜಿಕೆವಿಕೆ ಆವರಣದ ಪೌಷ್ಟಿಕ ಧಾನ್ಯಗಳ ಶ್ರೇಷ್ಠತಾ ಕೇಂದ್ರವು ಜೈವಿಕ ಭಾರತ ಪ್ರಶಸ್ತಿ 2025ರಲ್ಲಿ 3ನೇ ಸ್ಥಾನ ಗಳಿಸಿದೆ. ಹೆಮ್ಮೆಯ ಹಳೆ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಹಳೆವಿದ್ಯಾರ್ಥಿಗಳಾದ ಡಾ. ಎಸ್. ಅಯ್ಯಪ್ಪನ್ (ನೀಲಿ ಕ್ರಾಂತಿಯ ಶಿಲ್ಪಿ), ಡಾ. ಎಸ್. ರಾಮಸ್ವಾಮಿ (ನಾರ್ತ್‌ವೆಸ್ಟ್ ಕಮಿಷನ್ ಆನ್ ಕಾಲೇಜಸ್‌ನ ಅಧ್ಯಕ್ಷ), ಡಾ. ಕೃಷ್ಣ (ಕೋವ್ಯಾಕ್ಸಿನ್ ಸಂಶೋಧಕ), ಡಾ. ಜಿ. ಪರಮೇಶ್ವರ್ (ಗೃಹ ಸಚಿವರು), ಮತ್ತು ಡಾ. ಜೆ. ರಾಧಾಕೃಷ್ಣನ್ (ತಮಿಳುನಾಡು ಆರೋಗ್ಯ ಕಾರ್ಯದರ್ಶಿ) ರಾಷ್ಟ್ರಕ್ಕೆ ಕೀರ್ತಿಯನ್ನು ತಂದಿದ್ದಾರೆ.

ಸರ್ಕಾರದ ಕೊಡುಗೆ ಕೃಷಿ ಇಲಾಖೆಯ 43 ಪ್ರಯೋಗಾಲಯಗಳು NABL ಮಾನ್ಯತೆ ಪಡೆದ ಮೊದಲ ರಾಜ್ಯವಾಗಿದೆ, ಇದಕ್ಕಾಗಿ 6 ಕೋಟಿ ರೂ. ಅನುದಾನವನ್ನು ಕಲ್ಪಿಸಲಾಗಿದೆ. ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯಡಿ 5000 ಕಿರು ಘಟಕಗಳ ಸ್ಥಾಪನೆಗೆ 206 ಕೋಟಿ ರೂ. ಬಜೆಟ್‌ನಲ್ಲಿ ಒದಗಿಸಲಾಗಿದೆ. ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಈ ವರ್ಷ ಪ್ರವೇಶಾತಿ ಆರಂಭವಾಗಿದೆ. ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕುಲಪತಿಗಳು, ಅಧಿಕಾರಿಗಳು, ವಿಜ್ಞಾನಿಗಳು, ವಿದ್ಯಾರ್ಥಿಗಳು, ಹಳೆವಿದ್ಯಾರ್ಥಿಗಳು, ರೈತರು ಮತ್ತು ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

4 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

7 hours ago