ರಾಜ್ಯ

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದಂತೆ ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಬಾರಿ ಭಾಗಿಯಾಗಿ ರಾಜ್ಯದ ಹೆಮ್ಮೆಯ ಪ್ರತೀಕವಾಗಿದ್ದ ಗಜೇಂದ್ರ ಚಾಮರಾಜನಗರ ಬೂದಿಪಡಗ ಶಿಬಿರದಲ್ಲಿ ಇತ್ತೀಚೆಗೆ ಒಂಟಿಯಾಗಿ ಹೋಗಿದ್ದ. ಸಾಮಾನ್ಯವಾಗಿ ಆನೆಗಳು ಗುಂಪಾಗಿ ವಾಸಿಸುವ ಸೂಕ್ಷ್ಮ ಮನಸ್ಸಿನ ಜೀವಿಯಾಗಿದ್ದು, ಒಂಟಿತನದಿಂದ ಕೃಶವಾಗಿದ್ದಾನೆ, ಕಾಡಿಗೆ ಮೇಯಲು ಬಿಟ್ಟರೆ, ಕಾಡಾನೆಗಳೊಂದಿಗೆ ಕಾದಾಡುವ ಸಾಮರ್ಥ್ಯವನ್ನೂ ಕಳೆದುಕೊಂಡಿದ್ದಾನೆ. ಹೀಗಾಗಿ ಸುರಕ್ಷಿತ ಆನೆ ಶಿಬಿರಕ್ಕೆ ಗಜೇಂದ್ರನನ್ನು ಸ್ಥಳಾಂತರಿಸಬೇಕು ಎಂದು ಸಾಮಾಜಿಕ ಜಾಲ ತಾಣದಲ್ಲಿ ಅಭಿಯಾನವೂ ನಡೆಯುತ್ತಿತ್ತು. ಹಲವರು ಈಶ್ವರ ಖಂಡ್ರೆ ಅವರಿಗೆ ಮನವಿಯನ್ನೂ ಅರ್ಪಿಸಿದ್ದರು.

ಜನರ ಭಾವನೆಗಳಿಗೆ ಮತ್ತು ಮನವಿಗೆ ಸ್ಪಂದಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಕೂಡಲೇ ನಿಯಮಾನುಸಾರ ಕ್ರಮ ವಹಿಸುವಂತೆ ಕಳೆದ 26ರಂದು ಲಿಖಿತ ಆದೇಶ ನೀಡಿದ್ದರು.

ಇಂದು ಮಧ್ಯಾಹ್ನ ಬೂದಿ ಪಡಗದಲ್ಲಿ ಗಜೇಂದ್ರನಿಗೆ ಪೂಜೆ ಸಲ್ಲಿಸಿ, ಇಲಾಖೆಯ ಆನೆ ರಕ್ಷಣೆ ವಾಹನದಲ್ಲಿ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ಗಜೇಂದ್ರ ಆನೆಯ ಅಭಿಮಾನಿಗಳು, ಸಾರ್ವಜನಿಕರ ಭಾವನೆಗೆ ಸ್ಪಂದಿಸಿದ ಈಶ್ವರ ಖಂಡ್ರೆ ಅವರಿಗೆ ಸಾಮಾಜಿಕ ತಾಣಗಳಲ್ಲಿ ಕೃತಜ್ಞತೆ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

4 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

7 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

7 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

8 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

8 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

8 hours ago