krs damm
ಬೆಂಗಳೂರು: ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡು ಮಳೆ ಕೊರತೆ ಎದುರಾಗಿದ್ದರೂ ಪ್ರಮುಖ ನದಿಗಳ ಜಲಾನಯನ ಭಾಗದಲ್ಲಿ ಉತ್ತಮ ಮಳೆಯಾದ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಶೇ.64ರಷ್ಟು ನೀರು ಸಂಗ್ರಹವಾಗಿದೆ.
ಕಾವೇರಿ ಹಾಗೂ ಕೃಷ್ಣ ಕೊಳ್ಳದ ಜಲಾನಯನ ಭಾಗದಲ್ಲಿ ಮುಂಗಾರು ಆರಂಭಗೊಂಡಾಗಿನಿಂದಲೂ ಸತತ ಮಳೆಯಾಗುತ್ತಿರುವುದರಿಂದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದ 14 ಪ್ರಮುಖ ಜಲಾಶಯಗಳ ಗರಿಷ್ಠ ನೀರಿನ ಸಂಗ್ರಹ ಸಾಮಥ್ಯ 895.62 ಟಿಎಂಸಿ ಅಡಿಗಳಾಗಿದ್ದು, ಪ್ರಸ್ತುತ 574.82 ಟಿಎಂಸಿ ಅಡಿ ನೀರು ಸಂಗ್ರವಾಗಿದೆ. ಸುಮಾರು 2,92,000 ಕ್ಯೂಸೆಕ್ಸ್ನಷ್ಟು ನೀರಿನ ಒಳಹರಿವು ಇದ್ದು, ಸುಮಾರು 2 ಲಕ್ಷ ಕ್ಯೂಸೆಕ್ನಷ್ಟು ಹೊರಹರಿವು ಇದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 259.81 ಟಿಎಂಸಿ ಅಡಿಯಷ್ಟು ಮಾತ್ರ ಜಲಾಶಯಗಳಲ್ಲಿ ನೀರು ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ದುಪ್ಪಟ್ಟು ನೀರಿನ ಸಂಗ್ರಹವಿದ್ದು, ಕುಡಿಯುವ ನೀರು ಹಾಗೂ ನೀರಾವರಿ ಪ್ರದೇಶಗಳ ಬೆಳೆಗಳಿಗೆ ನೀರು ಒದಗಿಸುವ ಸಮಸ್ಯೆ ಸದ್ಯಕ್ಕೆ ಪರಿಹಾರವಾದಂತಾಗಿದೆ.
ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ಸೂಪ, ವರಾಹಿ ಜಲಾಶಯಗಳ ಒಟ್ಟು ಗರಿಷ್ಠ ಸಾಮಥ್ರ್ಯ 328.18 ಟಿಎಂಸಿ ಅಡಿ ಆಗಿದ್ದು, ಪ್ರಸ್ತುತ 149.39 ಟಿಎಂಸಿ ಅಡಿಯಷ್ಟು ನೀರಿದೆ. ಒಟ್ಟಾರೆ ಶೇ.46ರಷ್ಟು ನೀರು ಸಂಗ್ರಹವಾಗಿದ್ದು, 70 ಸಾವಿರ ಕ್ಯೂಸೆಕ್ಗೂ ಅಧಿಕ ನೀರಿನ ಒಳಹರಿವಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 67.70 ಟಿಎಂಸಿ ಅಡಿಯಷ್ಟು ಮಾತ್ರ ನೀರಿತ್ತು. ಈಗಾಗಲೇ ಕೆಆರ್ಎಸ್ ಜಲಾಶಯ ಭರ್ತಿಯಾಗಿ ಬಾಗಿನವನ್ನು ಅರ್ಪಿಸಲಾಗಿದೆ.
ಕಾವೇರಿ ಕೊಳ್ಳದ ಹಾರಂಗಿ, ಹೇಮಾವತಿ, ಕಬಿನಿ ಹಾಗೂ ಕೆಆರ್ಎಸ್ ಜಲಾಶಯಗಳ ಒಟ್ಟು ಗರಿಷ್ಠ ನೀರಿನ ಸಾಮರ್ಥ್ಯ 114.57 ಟಿಎಂಸಿ ಅಡಿ, ಪ್ರಸ್ತುತ 105.51 ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾಗಿದ್ದು, ಶೇ.92ರಷ್ಟು ಭರ್ತಿಯಾಗಿವೆ.
ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…
ಮೈಸೂರು: ಆರ್ಸಿಬಿ ಅಭಿಮಾನಿಗಳಿಗೆ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಗುಡ್ನ್ಯೂಸ್ ನೀಡಿದ್ದು, ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…
ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್ ಅವರನ್ನು ನಿರ್ಮಾಪಕ ಹರ್ಷವರ್ಧನ್ ಕಿಡ್ನ್ಯಾಪ್ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…
ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ…
ಹಾಸನ: ಕಂಬ ಏರಿ ವಿದ್ಯುತ್ ತಂತಿ ದುರಸ್ತಿ ಮಾಡುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್…