ರಾಜ್ಯ

ರಾಜ್ಯದ ಜಲಾಶಯಗಳಲ್ಲಿ ಶೇ.64ರಷ್ಟು ನೀರು ಸಂಗ್ರಹ: ಅನ್ನದಾತರಲ್ಲಿ ಮನೆಮಾಡಿದ ಸಂತಸ

ಬೆಂಗಳೂರು: ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡು ಮಳೆ ಕೊರತೆ ಎದುರಾಗಿದ್ದರೂ ಪ್ರಮುಖ ನದಿಗಳ ಜಲಾನಯನ ಭಾಗದಲ್ಲಿ ಉತ್ತಮ ಮಳೆಯಾದ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಶೇ.64ರಷ್ಟು ನೀರು ಸಂಗ್ರಹವಾಗಿದೆ.

ಕಾವೇರಿ ಹಾಗೂ ಕೃಷ್ಣ ಕೊಳ್ಳದ ಜಲಾನಯನ ಭಾಗದಲ್ಲಿ ಮುಂಗಾರು ಆರಂಭಗೊಂಡಾಗಿನಿಂದಲೂ ಸತತ ಮಳೆಯಾಗುತ್ತಿರುವುದರಿಂದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದ 14 ಪ್ರಮುಖ ಜಲಾಶಯಗಳ ಗರಿಷ್ಠ ನೀರಿನ ಸಂಗ್ರಹ ಸಾಮಥ್ಯ 895.62 ಟಿಎಂಸಿ ಅಡಿಗಳಾಗಿದ್ದು, ಪ್ರಸ್ತುತ 574.82 ಟಿಎಂಸಿ ಅಡಿ ನೀರು ಸಂಗ್ರವಾಗಿದೆ. ಸುಮಾರು 2,92,000 ಕ್ಯೂಸೆಕ್ಸ್‌ನಷ್ಟು ನೀರಿನ ಒಳಹರಿವು ಇದ್ದು, ಸುಮಾರು 2 ಲಕ್ಷ ಕ್ಯೂಸೆಕ್‍ನಷ್ಟು ಹೊರಹರಿವು ಇದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 259.81 ಟಿಎಂಸಿ ಅಡಿಯಷ್ಟು ಮಾತ್ರ ಜಲಾಶಯಗಳಲ್ಲಿ ನೀರು ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ದುಪ್ಪಟ್ಟು ನೀರಿನ ಸಂಗ್ರಹವಿದ್ದು, ಕುಡಿಯುವ ನೀರು ಹಾಗೂ ನೀರಾವರಿ ಪ್ರದೇಶಗಳ ಬೆಳೆಗಳಿಗೆ ನೀರು ಒದಗಿಸುವ ಸಮಸ್ಯೆ ಸದ್ಯಕ್ಕೆ ಪರಿಹಾರವಾದಂತಾಗಿದೆ.

ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ಸೂಪ, ವರಾಹಿ ಜಲಾಶಯಗಳ ಒಟ್ಟು ಗರಿಷ್ಠ ಸಾಮಥ್ರ್ಯ 328.18 ಟಿಎಂಸಿ ಅಡಿ ಆಗಿದ್ದು, ಪ್ರಸ್ತುತ 149.39 ಟಿಎಂಸಿ ಅಡಿಯಷ್ಟು ನೀರಿದೆ. ಒಟ್ಟಾರೆ ಶೇ.46ರಷ್ಟು ನೀರು ಸಂಗ್ರಹವಾಗಿದ್ದು, 70 ಸಾವಿರ ಕ್ಯೂಸೆಕ್‍ಗೂ ಅಧಿಕ ನೀರಿನ ಒಳಹರಿವಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 67.70 ಟಿಎಂಸಿ ಅಡಿಯಷ್ಟು ಮಾತ್ರ ನೀರಿತ್ತು. ಈಗಾಗಲೇ ಕೆಆರ್‍ಎಸ್ ಜಲಾಶಯ ಭರ್ತಿಯಾಗಿ ಬಾಗಿನವನ್ನು ಅರ್ಪಿಸಲಾಗಿದೆ.
ಕಾವೇರಿ ಕೊಳ್ಳದ ಹಾರಂಗಿ, ಹೇಮಾವತಿ, ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಗಳ ಒಟ್ಟು ಗರಿಷ್ಠ ನೀರಿನ ಸಾಮರ್ಥ್ಯ 114.57 ಟಿಎಂಸಿ ಅಡಿ, ಪ್ರಸ್ತುತ 105.51 ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾಗಿದ್ದು, ಶೇ.92ರಷ್ಟು ಭರ್ತಿಯಾಗಿವೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

17 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

17 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago