ರಾಜ್ಯ

ರಾಜ್ಯದ ಜಲಾಶಯಗಳಲ್ಲಿ ಶೇ.64ರಷ್ಟು ನೀರು ಸಂಗ್ರಹ: ಅನ್ನದಾತರಲ್ಲಿ ಮನೆಮಾಡಿದ ಸಂತಸ

ಬೆಂಗಳೂರು: ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡು ಮಳೆ ಕೊರತೆ ಎದುರಾಗಿದ್ದರೂ ಪ್ರಮುಖ ನದಿಗಳ ಜಲಾನಯನ ಭಾಗದಲ್ಲಿ ಉತ್ತಮ ಮಳೆಯಾದ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಶೇ.64ರಷ್ಟು ನೀರು ಸಂಗ್ರಹವಾಗಿದೆ.

ಕಾವೇರಿ ಹಾಗೂ ಕೃಷ್ಣ ಕೊಳ್ಳದ ಜಲಾನಯನ ಭಾಗದಲ್ಲಿ ಮುಂಗಾರು ಆರಂಭಗೊಂಡಾಗಿನಿಂದಲೂ ಸತತ ಮಳೆಯಾಗುತ್ತಿರುವುದರಿಂದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದ 14 ಪ್ರಮುಖ ಜಲಾಶಯಗಳ ಗರಿಷ್ಠ ನೀರಿನ ಸಂಗ್ರಹ ಸಾಮಥ್ಯ 895.62 ಟಿಎಂಸಿ ಅಡಿಗಳಾಗಿದ್ದು, ಪ್ರಸ್ತುತ 574.82 ಟಿಎಂಸಿ ಅಡಿ ನೀರು ಸಂಗ್ರವಾಗಿದೆ. ಸುಮಾರು 2,92,000 ಕ್ಯೂಸೆಕ್ಸ್‌ನಷ್ಟು ನೀರಿನ ಒಳಹರಿವು ಇದ್ದು, ಸುಮಾರು 2 ಲಕ್ಷ ಕ್ಯೂಸೆಕ್‍ನಷ್ಟು ಹೊರಹರಿವು ಇದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 259.81 ಟಿಎಂಸಿ ಅಡಿಯಷ್ಟು ಮಾತ್ರ ಜಲಾಶಯಗಳಲ್ಲಿ ನೀರು ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ದುಪ್ಪಟ್ಟು ನೀರಿನ ಸಂಗ್ರಹವಿದ್ದು, ಕುಡಿಯುವ ನೀರು ಹಾಗೂ ನೀರಾವರಿ ಪ್ರದೇಶಗಳ ಬೆಳೆಗಳಿಗೆ ನೀರು ಒದಗಿಸುವ ಸಮಸ್ಯೆ ಸದ್ಯಕ್ಕೆ ಪರಿಹಾರವಾದಂತಾಗಿದೆ.

ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ಸೂಪ, ವರಾಹಿ ಜಲಾಶಯಗಳ ಒಟ್ಟು ಗರಿಷ್ಠ ಸಾಮಥ್ರ್ಯ 328.18 ಟಿಎಂಸಿ ಅಡಿ ಆಗಿದ್ದು, ಪ್ರಸ್ತುತ 149.39 ಟಿಎಂಸಿ ಅಡಿಯಷ್ಟು ನೀರಿದೆ. ಒಟ್ಟಾರೆ ಶೇ.46ರಷ್ಟು ನೀರು ಸಂಗ್ರಹವಾಗಿದ್ದು, 70 ಸಾವಿರ ಕ್ಯೂಸೆಕ್‍ಗೂ ಅಧಿಕ ನೀರಿನ ಒಳಹರಿವಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 67.70 ಟಿಎಂಸಿ ಅಡಿಯಷ್ಟು ಮಾತ್ರ ನೀರಿತ್ತು. ಈಗಾಗಲೇ ಕೆಆರ್‍ಎಸ್ ಜಲಾಶಯ ಭರ್ತಿಯಾಗಿ ಬಾಗಿನವನ್ನು ಅರ್ಪಿಸಲಾಗಿದೆ.
ಕಾವೇರಿ ಕೊಳ್ಳದ ಹಾರಂಗಿ, ಹೇಮಾವತಿ, ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಗಳ ಒಟ್ಟು ಗರಿಷ್ಠ ನೀರಿನ ಸಾಮರ್ಥ್ಯ 114.57 ಟಿಎಂಸಿ ಅಡಿ, ಪ್ರಸ್ತುತ 105.51 ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾಗಿದ್ದು, ಶೇ.92ರಷ್ಟು ಭರ್ತಿಯಾಗಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

57 mins ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

60 mins ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

1 hour ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

1 hour ago