ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಏಳು ಕೋಟಿ ರೂ.ಗೂ ಹೆಚ್ಚಿನ ಮೊತ್ತದ ದರೋಡೆ ಪ್ರಕರಣದಲ್ಲಿ ಮಹತ್ವದ ಸುಳಿವು ದೊರೆತಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದೆ.
ಘಟನೆ ನಡೆದ ತಕ್ಷಣವೇ ನಗರ ಪೊಲೀಸರು ಎಚ್ಚೆತ್ತುಕೊಂಡು ಆರೋಪಿಗಳ ಬೆನ್ನು ಹತ್ತಿದ್ದಾರೆ. ತಾಂತ್ರಿಕವಾಗಿ ಹಾಗೂ ಸಾಂಪ್ರದಾಯಿಕ ಮಾರ್ಗಗಳ ಮೂಲಕ ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪರಿಶೀಲಿಸಿದಾಗ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಭಟ್ಟರ ಹಳ್ಳಿ ರಸ್ತೆ ಮೂಲಕ ಸಂಚರಿಸಿರುವುದು ಕಂಡು ಬಂದಿದೆ.
ಅಲ್ಲಿಂದ ಆಂಧ್ರಪ್ರದೇಶದತ್ತ ಕಾರು ಚಲಿಸಿದ್ದು, ಚಿತ್ತೂರಿನಲ್ಲಿ ಅನಾಮಧೇಯವಾಗಿ ನಿಂತಿದೆ. ಆರೋಪಿಗಳು ಹಣವನ್ನು ಮತ್ತೊಂದು ವಾಹನಕ್ಕೆ ಬದಲಾಯಿಸಿಕೊಂಡು ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ನಗರ ಪೊಲೀಸರ ತಂಡವೊಂದು ಆಂಧ್ರಪ್ರದೇಶಕ್ಕೆ ತೆರಳಿ ಕಾರನ್ನು ತಪಾಸಣೆ ನಡೆಸುತ್ತಿದೆ.
ತಿರುಪತಿ, ಚಿತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಅಲ್ಲಿನ ಲಾಡ್ಜ್ಗಳಲ್ಲಿ ಹುಡುಕಾಟ ನಡೆದಿದೆ. ಹೆದ್ದಾರಿ ಟೋಲ್ಗಳಲ್ಲಿ ಹಾದು ಹೋಗಿರುವ ವಾಹನಗಳನ್ನು ಸಿಸಿಟಿವಿಯಲ್ಲಿ ಪರಿಶೀಲಿಸಲಾಗಿದೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ನಗರ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ. ಆರೋಪಿಗಳು ಚಿತ್ತೂರಿನಿಂದ ಬೇರೆಡೆಗೆ ಪರಾರಿಯಾಗಿರುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ.
ಈ ನಡುವೆ ನಗರ ಪೊಲೀಸರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ನಗರದಲ್ಲಿರುವ ಮತ್ತೊಂದು ತಂಡ ತನಿಖೆ ಚುರುಕುಗೊಳಿಸಿದ್ದು ಕೆಲವರನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳಿಗೆ ವಾಹನ ಸೌಲಭ್ಯ ಕಲ್ಪಿಸಿದವರು ಹಾಗೂ ಇತರ ರೀತಿಯಲ್ಲಿ ನೆರವಾದ ಆರೋಪಕ್ಕಾಗಿ ವಿಚಾರಣೆಗಳನ್ನು ಮುಂದುವರಿಸಲಾಗಿದೆ.
ನಿನ್ನೆ ಬೆಂಗಳೂರಿನ ಜೆ.ಪಿ.ನಗರದಿಂದ ಎಟಿಎಂ ಯಂತ್ರಗಳಿಗೆ ಹಣ ತುಂಬಲು ಹೋಗುತ್ತಿದ್ದ ವಾಹನವನ್ನು ದರೋಡೆಕೋರರು ಆರ್ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡ ಗಟ್ಟಿ ಹೈಜಾಕ್ ಮಾಡಿದ್ದರು. ಸಿದ್ದಾಪುರ ಪೊಲೀಸ್ ಠಾಣೆಗೆ ಒಂದು ಕಿಲೋಮೀಟರ್ ಅಂತರದಲ್ಲಿರುವ ಅಶೋಕ ಪಿಲ್ಲರ್ ಬಳಿ ವಾಹನವನ್ನು ತಡೆದು ಚಾಲಕ ಅದರಲ್ಲಿದ್ದ ಗನ್ ಮ್ಯಾನ್ಗಳು, ಕಸ್ಟೋಡಿಯನ್ ಅವರುಗಳ ಮೊಬೈಲ್ಗಳನ್ನು ಕಸಿದುಕೊಂಡು ಅವರನ್ನು ತಮ್ಮ ವಾಹನದಲ್ಲಿ ಕೂರಿಸಿಕೊಂಡು ನಗರದ ಡೈರಿ ಸರ್ಕಲ್ ಬಳಿಯ ಫ್ಲೈಓವರ್ ಮೇಲೆ ಹೋಗಿ ಹಣವನ್ನು ಮತ್ತೊಂದು ವಾಹನಕ್ಕೆ ಸ್ಥಳಾಂತರ ಮಾಡಿದ್ದರು. ಸಿಬ್ಬಂದಿಗಳನ್ನು ಸ್ವಲ್ಪ ದೂರ ಕರೆದು ಹೋಗಿ, ಅರ್ಧದಲ್ಲೇ ಇಳಿಸಿ ಪರಾರಿಯಾಗಿದ್ದಾರೆ.
ಈ ಪ್ರಕರಣ ರಾಜ್ಯದಲ್ಲಷ್ಟೇ ಅಲ್ಲದೇ ದೇಶದಲ್ಲೂ ಭಾರೀ ಸದ್ದು ಮಾಡಿದೆ. ಬೆಂಗಳೂರು ನಗರ ಪೊಲೀಸರಿಗೆ ಸವಾಲೊಡ್ಡಿದೆ. ಶತಾಯಗತಾಯ ಆರೋಪಿಗಳನ್ನು ಬಂಧಿಸಲು ನಗರ ಪೊಲೀಸರು ಹಗಲು ರಾತ್ರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…