ರಾಜ್ಯ

7 ಕೋಟಿ ದರೋಡೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದಲ್ಲಿ ಪತ್ತೆ

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಏಳು ಕೋಟಿ ರೂ.ಗೂ ಹೆಚ್ಚಿನ ಮೊತ್ತದ ದರೋಡೆ ಪ್ರಕರಣದಲ್ಲಿ ಮಹತ್ವದ ಸುಳಿವು ದೊರೆತಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದೆ.

ಘಟನೆ ನಡೆದ ತಕ್ಷಣವೇ ನಗರ ಪೊಲೀಸರು ಎಚ್ಚೆತ್ತುಕೊಂಡು ಆರೋಪಿಗಳ ಬೆನ್ನು ಹತ್ತಿದ್ದಾರೆ. ತಾಂತ್ರಿಕವಾಗಿ ಹಾಗೂ ಸಾಂಪ್ರದಾಯಿಕ ಮಾರ್ಗಗಳ ಮೂಲಕ ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪರಿಶೀಲಿಸಿದಾಗ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಭಟ್ಟರ ಹಳ್ಳಿ ರಸ್ತೆ ಮೂಲಕ ಸಂಚರಿಸಿರುವುದು ಕಂಡು ಬಂದಿದೆ.

ಅಲ್ಲಿಂದ ಆಂಧ್ರಪ್ರದೇಶದತ್ತ ಕಾರು ಚಲಿಸಿದ್ದು, ಚಿತ್ತೂರಿನಲ್ಲಿ ಅನಾಮಧೇಯವಾಗಿ ನಿಂತಿದೆ. ಆರೋಪಿಗಳು ಹಣವನ್ನು ಮತ್ತೊಂದು ವಾಹನಕ್ಕೆ ಬದಲಾಯಿಸಿಕೊಂಡು ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ನಗರ ಪೊಲೀಸರ ತಂಡವೊಂದು ಆಂಧ್ರಪ್ರದೇಶಕ್ಕೆ ತೆರಳಿ ಕಾರನ್ನು ತಪಾಸಣೆ ನಡೆಸುತ್ತಿದೆ.

ತಿರುಪತಿ, ಚಿತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಅಲ್ಲಿನ ಲಾಡ್ಜ್‌ಗಳಲ್ಲಿ ಹುಡುಕಾಟ ನಡೆದಿದೆ. ಹೆದ್ದಾರಿ ಟೋಲ್‍ಗಳಲ್ಲಿ ಹಾದು ಹೋಗಿರುವ ವಾಹನಗಳನ್ನು ಸಿಸಿಟಿವಿಯಲ್ಲಿ ಪರಿಶೀಲಿಸಲಾಗಿದೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ನಗರ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ. ಆರೋಪಿಗಳು ಚಿತ್ತೂರಿನಿಂದ ಬೇರೆಡೆಗೆ ಪರಾರಿಯಾಗಿರುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ.

ಈ ನಡುವೆ ನಗರ ಪೊಲೀಸರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ನಗರದಲ್ಲಿರುವ ಮತ್ತೊಂದು ತಂಡ ತನಿಖೆ ಚುರುಕುಗೊಳಿಸಿದ್ದು ಕೆಲವರನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳಿಗೆ ವಾಹನ ಸೌಲಭ್ಯ ಕಲ್ಪಿಸಿದವರು ಹಾಗೂ ಇತರ ರೀತಿಯಲ್ಲಿ ನೆರವಾದ ಆರೋಪಕ್ಕಾಗಿ ವಿಚಾರಣೆಗಳನ್ನು ಮುಂದುವರಿಸಲಾಗಿದೆ.

ನಿನ್ನೆ ಬೆಂಗಳೂರಿನ ಜೆ.ಪಿ.ನಗರದಿಂದ ಎಟಿಎಂ ಯಂತ್ರಗಳಿಗೆ ಹಣ ತುಂಬಲು ಹೋಗುತ್ತಿದ್ದ ವಾಹನವನ್ನು ದರೋಡೆಕೋರರು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡ ಗಟ್ಟಿ ಹೈಜಾಕ್ ಮಾಡಿದ್ದರು. ಸಿದ್ದಾಪುರ ಪೊಲೀಸ್ ಠಾಣೆಗೆ ಒಂದು ಕಿಲೋಮೀಟರ್ ಅಂತರದಲ್ಲಿರುವ ಅಶೋಕ ಪಿಲ್ಲರ್ ಬಳಿ ವಾಹನವನ್ನು ತಡೆದು ಚಾಲಕ ಅದರಲ್ಲಿದ್ದ ಗನ್ ಮ್ಯಾನ್‍ಗಳು, ಕಸ್ಟೋಡಿಯನ್ ಅವರುಗಳ ಮೊಬೈಲ್‍ಗಳನ್ನು ಕಸಿದುಕೊಂಡು ಅವರನ್ನು ತಮ್ಮ ವಾಹನದಲ್ಲಿ ಕೂರಿಸಿಕೊಂಡು ನಗರದ ಡೈರಿ ಸರ್ಕಲ್ ಬಳಿಯ ಫ್ಲೈಓವರ್ ಮೇಲೆ ಹೋಗಿ ಹಣವನ್ನು ಮತ್ತೊಂದು ವಾಹನಕ್ಕೆ ಸ್ಥಳಾಂತರ ಮಾಡಿದ್ದರು. ಸಿಬ್ಬಂದಿಗಳನ್ನು ಸ್ವಲ್ಪ ದೂರ ಕರೆದು ಹೋಗಿ, ಅರ್ಧದಲ್ಲೇ ಇಳಿಸಿ ಪರಾರಿಯಾಗಿದ್ದಾರೆ.

ಈ ಪ್ರಕರಣ ರಾಜ್ಯದಲ್ಲಷ್ಟೇ ಅಲ್ಲದೇ ದೇಶದಲ್ಲೂ ಭಾರೀ ಸದ್ದು ಮಾಡಿದೆ. ಬೆಂಗಳೂರು ನಗರ ಪೊಲೀಸರಿಗೆ ಸವಾಲೊಡ್ಡಿದೆ. ಶತಾಯಗತಾಯ ಆರೋಪಿಗಳನ್ನು ಬಂಧಿಸಲು ನಗರ ಪೊಲೀಸರು ಹಗಲು ರಾತ್ರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾ.ಬೆಟ್ಟದ ತಪ್ಪಲಿನಲ್ಲಿ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ಸಸ್ಯ ಸಂಕುಲ ಹಾನಿ

ಮೈಸೂರು:  ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿ‌ಉರಿದಿದ್ದು,ಕೆಲಕಾಲ‌ ಆತಂಕ‌ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…

8 hours ago

ಮೈಸೂರು | ಅಪೋಲೋ ಆಸ್ಪತ್ರೆಯಲ್ಲಿ ರೋಬೊಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…

9 hours ago

ಆವಿಷ್ಕಾರ,ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ : ಎನ್.ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…

10 hours ago

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವದ ಆಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…

10 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ಅವಿರೋಧ ಆಯ್ಕೆ

ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…

10 hours ago

ವಿಡಿಯೋ ವೈರಲ್‌ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅಜ್ಞಾತ ಸ್ಥಳಕ್ಕೆ

ಬೆಂಗಳೂರು : ಡಿಜಿಪಿ ರಾಮಚಂದ್ರರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್‌ ಅವರು ಹತ್ತು…

11 hours ago