ರಾಜ್ಯ

7 ಕೋಟಿ ದರೋಡೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದಲ್ಲಿ ಪತ್ತೆ

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಏಳು ಕೋಟಿ ರೂ.ಗೂ ಹೆಚ್ಚಿನ ಮೊತ್ತದ ದರೋಡೆ ಪ್ರಕರಣದಲ್ಲಿ ಮಹತ್ವದ ಸುಳಿವು ದೊರೆತಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದೆ.

ಘಟನೆ ನಡೆದ ತಕ್ಷಣವೇ ನಗರ ಪೊಲೀಸರು ಎಚ್ಚೆತ್ತುಕೊಂಡು ಆರೋಪಿಗಳ ಬೆನ್ನು ಹತ್ತಿದ್ದಾರೆ. ತಾಂತ್ರಿಕವಾಗಿ ಹಾಗೂ ಸಾಂಪ್ರದಾಯಿಕ ಮಾರ್ಗಗಳ ಮೂಲಕ ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪರಿಶೀಲಿಸಿದಾಗ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಭಟ್ಟರ ಹಳ್ಳಿ ರಸ್ತೆ ಮೂಲಕ ಸಂಚರಿಸಿರುವುದು ಕಂಡು ಬಂದಿದೆ.

ಅಲ್ಲಿಂದ ಆಂಧ್ರಪ್ರದೇಶದತ್ತ ಕಾರು ಚಲಿಸಿದ್ದು, ಚಿತ್ತೂರಿನಲ್ಲಿ ಅನಾಮಧೇಯವಾಗಿ ನಿಂತಿದೆ. ಆರೋಪಿಗಳು ಹಣವನ್ನು ಮತ್ತೊಂದು ವಾಹನಕ್ಕೆ ಬದಲಾಯಿಸಿಕೊಂಡು ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ನಗರ ಪೊಲೀಸರ ತಂಡವೊಂದು ಆಂಧ್ರಪ್ರದೇಶಕ್ಕೆ ತೆರಳಿ ಕಾರನ್ನು ತಪಾಸಣೆ ನಡೆಸುತ್ತಿದೆ.

ತಿರುಪತಿ, ಚಿತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಅಲ್ಲಿನ ಲಾಡ್ಜ್‌ಗಳಲ್ಲಿ ಹುಡುಕಾಟ ನಡೆದಿದೆ. ಹೆದ್ದಾರಿ ಟೋಲ್‍ಗಳಲ್ಲಿ ಹಾದು ಹೋಗಿರುವ ವಾಹನಗಳನ್ನು ಸಿಸಿಟಿವಿಯಲ್ಲಿ ಪರಿಶೀಲಿಸಲಾಗಿದೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ನಗರ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ. ಆರೋಪಿಗಳು ಚಿತ್ತೂರಿನಿಂದ ಬೇರೆಡೆಗೆ ಪರಾರಿಯಾಗಿರುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ.

ಈ ನಡುವೆ ನಗರ ಪೊಲೀಸರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ನಗರದಲ್ಲಿರುವ ಮತ್ತೊಂದು ತಂಡ ತನಿಖೆ ಚುರುಕುಗೊಳಿಸಿದ್ದು ಕೆಲವರನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳಿಗೆ ವಾಹನ ಸೌಲಭ್ಯ ಕಲ್ಪಿಸಿದವರು ಹಾಗೂ ಇತರ ರೀತಿಯಲ್ಲಿ ನೆರವಾದ ಆರೋಪಕ್ಕಾಗಿ ವಿಚಾರಣೆಗಳನ್ನು ಮುಂದುವರಿಸಲಾಗಿದೆ.

ನಿನ್ನೆ ಬೆಂಗಳೂರಿನ ಜೆ.ಪಿ.ನಗರದಿಂದ ಎಟಿಎಂ ಯಂತ್ರಗಳಿಗೆ ಹಣ ತುಂಬಲು ಹೋಗುತ್ತಿದ್ದ ವಾಹನವನ್ನು ದರೋಡೆಕೋರರು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡ ಗಟ್ಟಿ ಹೈಜಾಕ್ ಮಾಡಿದ್ದರು. ಸಿದ್ದಾಪುರ ಪೊಲೀಸ್ ಠಾಣೆಗೆ ಒಂದು ಕಿಲೋಮೀಟರ್ ಅಂತರದಲ್ಲಿರುವ ಅಶೋಕ ಪಿಲ್ಲರ್ ಬಳಿ ವಾಹನವನ್ನು ತಡೆದು ಚಾಲಕ ಅದರಲ್ಲಿದ್ದ ಗನ್ ಮ್ಯಾನ್‍ಗಳು, ಕಸ್ಟೋಡಿಯನ್ ಅವರುಗಳ ಮೊಬೈಲ್‍ಗಳನ್ನು ಕಸಿದುಕೊಂಡು ಅವರನ್ನು ತಮ್ಮ ವಾಹನದಲ್ಲಿ ಕೂರಿಸಿಕೊಂಡು ನಗರದ ಡೈರಿ ಸರ್ಕಲ್ ಬಳಿಯ ಫ್ಲೈಓವರ್ ಮೇಲೆ ಹೋಗಿ ಹಣವನ್ನು ಮತ್ತೊಂದು ವಾಹನಕ್ಕೆ ಸ್ಥಳಾಂತರ ಮಾಡಿದ್ದರು. ಸಿಬ್ಬಂದಿಗಳನ್ನು ಸ್ವಲ್ಪ ದೂರ ಕರೆದು ಹೋಗಿ, ಅರ್ಧದಲ್ಲೇ ಇಳಿಸಿ ಪರಾರಿಯಾಗಿದ್ದಾರೆ.

ಈ ಪ್ರಕರಣ ರಾಜ್ಯದಲ್ಲಷ್ಟೇ ಅಲ್ಲದೇ ದೇಶದಲ್ಲೂ ಭಾರೀ ಸದ್ದು ಮಾಡಿದೆ. ಬೆಂಗಳೂರು ನಗರ ಪೊಲೀಸರಿಗೆ ಸವಾಲೊಡ್ಡಿದೆ. ಶತಾಯಗತಾಯ ಆರೋಪಿಗಳನ್ನು ಬಂಧಿಸಲು ನಗರ ಪೊಲೀಸರು ಹಗಲು ರಾತ್ರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

23 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಬಿಎಸ್‌ವೈಗೆ ಲಿಂಗಾಯತ ಶಕ್ತಿಯದ್ದೇ ಚಿಂತೆ

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್‌ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…

57 mins ago

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

4 hours ago

ಆಂದೋಲನ ಸಂಪಾದಕೀಯ | ಸಾರ್ಥಕ ಪಯಣ 54 ; ಬೆನ್ನುತಟ್ಟಿ ನಡೆಸಿದವರು ನೀವು. . .

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…

5 hours ago

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

20 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

23 hours ago