ರಾಜ್ಯ

7 ಕೋಟಿ ದರೋಡೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದಲ್ಲಿ ಪತ್ತೆ

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಏಳು ಕೋಟಿ ರೂ.ಗೂ ಹೆಚ್ಚಿನ ಮೊತ್ತದ ದರೋಡೆ ಪ್ರಕರಣದಲ್ಲಿ ಮಹತ್ವದ ಸುಳಿವು ದೊರೆತಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದೆ.

ಘಟನೆ ನಡೆದ ತಕ್ಷಣವೇ ನಗರ ಪೊಲೀಸರು ಎಚ್ಚೆತ್ತುಕೊಂಡು ಆರೋಪಿಗಳ ಬೆನ್ನು ಹತ್ತಿದ್ದಾರೆ. ತಾಂತ್ರಿಕವಾಗಿ ಹಾಗೂ ಸಾಂಪ್ರದಾಯಿಕ ಮಾರ್ಗಗಳ ಮೂಲಕ ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪರಿಶೀಲಿಸಿದಾಗ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಭಟ್ಟರ ಹಳ್ಳಿ ರಸ್ತೆ ಮೂಲಕ ಸಂಚರಿಸಿರುವುದು ಕಂಡು ಬಂದಿದೆ.

ಅಲ್ಲಿಂದ ಆಂಧ್ರಪ್ರದೇಶದತ್ತ ಕಾರು ಚಲಿಸಿದ್ದು, ಚಿತ್ತೂರಿನಲ್ಲಿ ಅನಾಮಧೇಯವಾಗಿ ನಿಂತಿದೆ. ಆರೋಪಿಗಳು ಹಣವನ್ನು ಮತ್ತೊಂದು ವಾಹನಕ್ಕೆ ಬದಲಾಯಿಸಿಕೊಂಡು ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ನಗರ ಪೊಲೀಸರ ತಂಡವೊಂದು ಆಂಧ್ರಪ್ರದೇಶಕ್ಕೆ ತೆರಳಿ ಕಾರನ್ನು ತಪಾಸಣೆ ನಡೆಸುತ್ತಿದೆ.

ತಿರುಪತಿ, ಚಿತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಅಲ್ಲಿನ ಲಾಡ್ಜ್‌ಗಳಲ್ಲಿ ಹುಡುಕಾಟ ನಡೆದಿದೆ. ಹೆದ್ದಾರಿ ಟೋಲ್‍ಗಳಲ್ಲಿ ಹಾದು ಹೋಗಿರುವ ವಾಹನಗಳನ್ನು ಸಿಸಿಟಿವಿಯಲ್ಲಿ ಪರಿಶೀಲಿಸಲಾಗಿದೆ. ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ನಗರ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ. ಆರೋಪಿಗಳು ಚಿತ್ತೂರಿನಿಂದ ಬೇರೆಡೆಗೆ ಪರಾರಿಯಾಗಿರುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ.

ಈ ನಡುವೆ ನಗರ ಪೊಲೀಸರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ನಗರದಲ್ಲಿರುವ ಮತ್ತೊಂದು ತಂಡ ತನಿಖೆ ಚುರುಕುಗೊಳಿಸಿದ್ದು ಕೆಲವರನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳಿಗೆ ವಾಹನ ಸೌಲಭ್ಯ ಕಲ್ಪಿಸಿದವರು ಹಾಗೂ ಇತರ ರೀತಿಯಲ್ಲಿ ನೆರವಾದ ಆರೋಪಕ್ಕಾಗಿ ವಿಚಾರಣೆಗಳನ್ನು ಮುಂದುವರಿಸಲಾಗಿದೆ.

ನಿನ್ನೆ ಬೆಂಗಳೂರಿನ ಜೆ.ಪಿ.ನಗರದಿಂದ ಎಟಿಎಂ ಯಂತ್ರಗಳಿಗೆ ಹಣ ತುಂಬಲು ಹೋಗುತ್ತಿದ್ದ ವಾಹನವನ್ನು ದರೋಡೆಕೋರರು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡ ಗಟ್ಟಿ ಹೈಜಾಕ್ ಮಾಡಿದ್ದರು. ಸಿದ್ದಾಪುರ ಪೊಲೀಸ್ ಠಾಣೆಗೆ ಒಂದು ಕಿಲೋಮೀಟರ್ ಅಂತರದಲ್ಲಿರುವ ಅಶೋಕ ಪಿಲ್ಲರ್ ಬಳಿ ವಾಹನವನ್ನು ತಡೆದು ಚಾಲಕ ಅದರಲ್ಲಿದ್ದ ಗನ್ ಮ್ಯಾನ್‍ಗಳು, ಕಸ್ಟೋಡಿಯನ್ ಅವರುಗಳ ಮೊಬೈಲ್‍ಗಳನ್ನು ಕಸಿದುಕೊಂಡು ಅವರನ್ನು ತಮ್ಮ ವಾಹನದಲ್ಲಿ ಕೂರಿಸಿಕೊಂಡು ನಗರದ ಡೈರಿ ಸರ್ಕಲ್ ಬಳಿಯ ಫ್ಲೈಓವರ್ ಮೇಲೆ ಹೋಗಿ ಹಣವನ್ನು ಮತ್ತೊಂದು ವಾಹನಕ್ಕೆ ಸ್ಥಳಾಂತರ ಮಾಡಿದ್ದರು. ಸಿಬ್ಬಂದಿಗಳನ್ನು ಸ್ವಲ್ಪ ದೂರ ಕರೆದು ಹೋಗಿ, ಅರ್ಧದಲ್ಲೇ ಇಳಿಸಿ ಪರಾರಿಯಾಗಿದ್ದಾರೆ.

ಈ ಪ್ರಕರಣ ರಾಜ್ಯದಲ್ಲಷ್ಟೇ ಅಲ್ಲದೇ ದೇಶದಲ್ಲೂ ಭಾರೀ ಸದ್ದು ಮಾಡಿದೆ. ಬೆಂಗಳೂರು ನಗರ ಪೊಲೀಸರಿಗೆ ಸವಾಲೊಡ್ಡಿದೆ. ಶತಾಯಗತಾಯ ಆರೋಪಿಗಳನ್ನು ಬಂಧಿಸಲು ನಗರ ಪೊಲೀಸರು ಹಗಲು ರಾತ್ರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

11 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

12 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

13 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

14 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

17 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

18 hours ago