ಬೆಂಗಳೂರು: ಬೆಂಗಳೂರಿನಲ್ಲಿ 7 ಕೋಟಿ ರೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ.
ಜೊತೆಗೆ 5.30 ಕೋಟಿ ರೂ ಹಣವನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಝೇವಿಯರ್ ಎಂದು ಗುರುತಿಸಲಾಗಿದ್ದು, ಈತ ಕಾನ್ಸ್ಟೇಬಲ್ ಅಣ್ಣಪ್ಪನ ಸ್ನೇಹಿತ ಎಂದು ಗುರುತಿಸಲಾಗಿದೆ. ಇಬ್ಬರು ಸೇರಿಕೊಂಡು ಈ ದರೋಡೆಗೆ ಸ್ಕೆಚ್ ಹಾಕಿದ್ದರು.
ಇದನ್ನು ಓದಿ: 7 ಕೋಟಿ ದರೋಡೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದಲ್ಲಿ ಪತ್ತೆ
ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆ ಇನ್ಸ್ಪೆಕ್ಟರ್ ಅಣ್ಣಪ್ಪ ನಾಯಕ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯಕ್ ಇಡೀ ದರೋಡೆಯ ಮಾಸ್ಟರ್ ಮೈಂಡ್ ಎನ್ನಲಾಗಿದ್ದು, ಈತನ ಬಂಧನದ ಬೆನ್ನಲ್ಲೇ ಸ್ನೇಹಿತ ಝೇವಿಯರ್ನನ್ನು ಕೂಡ ಬಂಧಿಸಲಾಗಿದೆ.
ಅಣ್ಣಪ್ಪ ನಾಯ್ಕ್ ದರೋಡೆ ಮಾಡಲು ಹುಡುಗರ ಗ್ಯಾಂಗ್ ರೆಡಿ ಮಾಡಿದ್ದನು. ಕಳ್ಳತನ ಹೇಗೆ ಮಾಡಬೇಕು? ಹೇಗೆ ತಪ್ಪಿಸಿಕೊಳ್ಳಬೇಕು ಎಂದು ಈತ ಹುಡುಗರಿಗೆ ತರಬೇತಿ ಕೊಟ್ಟಿದ್ದನು. ಈತನ ಪ್ಲ್ಯಾನ್ನಂತೆ ಹುಡುಗರು 7.11 ಕೋಟಿ ದರೋಡೆ ಮಾಡಿದ್ದಾರೆ ಎನ್ನಲಾಗಿದ್ದು, ಸಿಎಂಎಸ್ ಸೆಕ್ಯುರಿಟಿ ಏಜೆನ್ಸಿಯ ಮಾಜಿ ಉದ್ಯೋಗಿಗಳು ಕೂಡ ದರೋಡೆಗೆ ಸಾಥ್ ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…