ರಾಜ್ಯ

7 ಕೋಟಿ ದರೋಡೆ ಪ್ರಕರಣ: ಸಿಎಂಎಸ್‌ ಮಾಜಿ ನೌಕರ ಅರೆಸ್ಟ್‌

ಬೆಂಗಳೂರು: ಬೆಂಗಳೂರಿನಲ್ಲಿ 7 ಕೋಟಿ ರೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್‌ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ.

ಜೊತೆಗೆ 5.30 ಕೋಟಿ ರೂ ಹಣವನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಝೇವಿಯರ್‌ ಎಂದು ಗುರುತಿಸಲಾಗಿದ್ದು, ಈತ ಕಾನ್ಸ್‌ಟೇಬಲ್‌ ಅಣ್ಣಪ್ಪನ ಸ್ನೇಹಿತ ಎಂದು ಗುರುತಿಸಲಾಗಿದೆ. ಇಬ್ಬರು ಸೇರಿಕೊಂಡು ಈ ದರೋಡೆಗೆ ಸ್ಕೆಚ್‌ ಹಾಕಿದ್ದರು.

ಇದನ್ನು ಓದಿ: 7 ಕೋಟಿ ದರೋಡೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದಲ್ಲಿ ಪತ್ತೆ

ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆ ಇನ್ಸ್‌ಪೆಕ್ಟರ್‌ ಅಣ್ಣಪ್ಪ ನಾಯಕ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯಕ್‌ ಇಡೀ ದರೋಡೆಯ ಮಾಸ್ಟರ್‌ ಮೈಂಡ್‌ ಎನ್ನಲಾಗಿದ್ದು, ಈತನ ಬಂಧನದ ಬೆನ್ನಲ್ಲೇ ಸ್ನೇಹಿತ ಝೇವಿಯರ್‌ನನ್ನು ಕೂಡ ಬಂಧಿಸಲಾಗಿದೆ.

ಅಣ್ಣಪ್ಪ ನಾಯ್ಕ್‌ ದರೋಡೆ ಮಾಡಲು ಹುಡುಗರ ಗ್ಯಾಂಗ್‌ ರೆಡಿ ಮಾಡಿದ್ದನು. ಕಳ್ಳತನ ಹೇಗೆ ಮಾಡಬೇಕು? ಹೇಗೆ ತಪ್ಪಿಸಿಕೊಳ್ಳಬೇಕು ಎಂದು ಈತ ಹುಡುಗರಿಗೆ ತರಬೇತಿ ಕೊಟ್ಟಿದ್ದನು. ಈತನ ಪ್ಲ್ಯಾನ್‌ನಂತೆ ಹುಡುಗರು 7.11 ಕೋಟಿ ದರೋಡೆ ಮಾಡಿದ್ದಾರೆ ಎನ್ನಲಾಗಿದ್ದು, ಸಿಎಂಎಸ್‌ ಸೆಕ್ಯುರಿಟಿ ಏಜೆನ್ಸಿಯ ಮಾಜಿ ಉದ್ಯೋಗಿಗಳು ಕೂಡ ದರೋಡೆಗೆ ಸಾಥ್ ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

25 mins ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

35 mins ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

42 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

59 mins ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

2 hours ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

3 hours ago