ಬೆಂಗಳೂರು : ಇಂದಿನಿಂದ ಪಂಪ್ಸೆಟ್ಗಳಿಗೆ 7 ಗಂಟೆ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ 7 ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದ್ದೆ, ಈಗ 7 ಗಂಟೆ ವಿದ್ಯುತ್ ನೀಡಲು ನಿರ್ಧರಿಸಿದ್ದೇವೆ ಎಂದರು.
ರಾಯಚೂರು, ಬಳ್ಳಾರಿ, ಯಾದಗಿರಿ, ಕೊಪ್ಪಳದವರು ನಮಗೆ ಭತ್ತ ಬೆಳೆಯಲು 7 ಗಂಟೆ ವಿದ್ಯುತ್ ಕೊಡಿ ಅಂತಾ ಮನವಿ ಮಾಡಿದ್ದರು. ಮುಂಚೆ 5 ಗಂಟೆ ವಿದ್ಯುತ್ ಕೊಡುತ್ತಿದ್ದ ಪ್ರದೇಶದಲ್ಲೂ 7 ಗಂಟೆ ಕೊಡೋದಕ್ಕೆ ನಿರ್ಧಾರ ಮಾಡಿದ್ದೇವೆ. ರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಪವರ್ ಉತ್ಪಾದನೆಯಾಗ್ತಿದೆ ಎಂದಿದ್ದಾರೆ.
ಸೆಕ್ಷನ್ ಲೆವೆಲ್ ಉಪಯೋಗಿಸಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ಹೊರ ರಾಜ್ಯಗಳಿಗೆ ಕೊಡಬಾರದು ಅಂತಾ ನಿರ್ಧಾರ ಮಾಡಲಾಗಿದೆ. ವಿದ್ಯುತ್ ಖರೀದಿಗೂ ನಿರ್ಧರಿಸಲಾಗಿದೆ. ಕೈಗಾರಿಕೆಗಳಿಗೆ ಡೊಮೆಸ್ಟಿಕ್ ಪವರ್ ಕಟ್ ಇಲ್ಲ. ಪಂಪ್ಸೆಟ್ ಗೆ ನೀಡುವ ವಿದ್ಯುತ್ಗೆ ಸರ್ಕಾರವೇ ಸಬ್ಸಿಡಿ ನೀಡಲಿದೆ ಎಂದಿದ್ದಾರೆ. ಇದಕ್ಕಾಗಿ 12,100 ಕೋಟಿ ರೂಪಾಯಿಯನ್ನು ಬಜೆಟ್ನಲ್ಲಿ ಒದಗಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಗೃಹಜ್ಯೋತಿ ಬಂದ ಮೇಲೆ ಅಮೃತ ಜ್ಯೋತಿ, ಕುಟೀರ ಜ್ಯೋತಿ ಯೋಜನೆಯನ್ನು ಗೃಹಜ್ಯೋತಿ ಯೋಜನೆಯಡಿ ಸೇರಿದ್ದೇವೆ. ಅವರಿಗೆ ಸರಾಸರಿ 58 ಯುನಿಟ್ ನೀಡಲಾಗುವುದು. ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಈ ಯೋಜನೆಗಳಲ್ಲಿ 38,966 ಕೋಟಿ ಹಣ ಬಾಕಿ ಉಳಿದಿತ್ತು. ಮಂಗಳೂರು , ಗುಲ್ಬರ್ಗಾ, ಚಾಮುಂಡೇಶ್ವರಿ ವಿದ್ಯುತ್ ಕಂಪನಿ ಸೇರಿದಂತೆ ಹಲವು ಕಂಪನಿಗಳಲ್ಲಿ ಬಾಕಿ ಉಳಿದಿತ್ತು. ಈ ಹಣವನ್ನ ಮನ್ನಾ ಮಾಡುತ್ತೇವೆ. ಅವರು ಬಾಕಿ ಕಟ್ಟಬೇಕಾದ ಅಗತ್ಯವಿಲ್ಲ ಎಂದಿದ್ದಾರೆ.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…