ಬೆಂಗಳೂರು : ಇಂದಿನಿಂದ ಪಂಪ್ಸೆಟ್ಗಳಿಗೆ 7 ಗಂಟೆ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ 7 ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದ್ದೆ, ಈಗ 7 ಗಂಟೆ ವಿದ್ಯುತ್ ನೀಡಲು ನಿರ್ಧರಿಸಿದ್ದೇವೆ ಎಂದರು.
ರಾಯಚೂರು, ಬಳ್ಳಾರಿ, ಯಾದಗಿರಿ, ಕೊಪ್ಪಳದವರು ನಮಗೆ ಭತ್ತ ಬೆಳೆಯಲು 7 ಗಂಟೆ ವಿದ್ಯುತ್ ಕೊಡಿ ಅಂತಾ ಮನವಿ ಮಾಡಿದ್ದರು. ಮುಂಚೆ 5 ಗಂಟೆ ವಿದ್ಯುತ್ ಕೊಡುತ್ತಿದ್ದ ಪ್ರದೇಶದಲ್ಲೂ 7 ಗಂಟೆ ಕೊಡೋದಕ್ಕೆ ನಿರ್ಧಾರ ಮಾಡಿದ್ದೇವೆ. ರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಪವರ್ ಉತ್ಪಾದನೆಯಾಗ್ತಿದೆ ಎಂದಿದ್ದಾರೆ.
ಸೆಕ್ಷನ್ ಲೆವೆಲ್ ಉಪಯೋಗಿಸಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ಹೊರ ರಾಜ್ಯಗಳಿಗೆ ಕೊಡಬಾರದು ಅಂತಾ ನಿರ್ಧಾರ ಮಾಡಲಾಗಿದೆ. ವಿದ್ಯುತ್ ಖರೀದಿಗೂ ನಿರ್ಧರಿಸಲಾಗಿದೆ. ಕೈಗಾರಿಕೆಗಳಿಗೆ ಡೊಮೆಸ್ಟಿಕ್ ಪವರ್ ಕಟ್ ಇಲ್ಲ. ಪಂಪ್ಸೆಟ್ ಗೆ ನೀಡುವ ವಿದ್ಯುತ್ಗೆ ಸರ್ಕಾರವೇ ಸಬ್ಸಿಡಿ ನೀಡಲಿದೆ ಎಂದಿದ್ದಾರೆ. ಇದಕ್ಕಾಗಿ 12,100 ಕೋಟಿ ರೂಪಾಯಿಯನ್ನು ಬಜೆಟ್ನಲ್ಲಿ ಒದಗಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಗೃಹಜ್ಯೋತಿ ಬಂದ ಮೇಲೆ ಅಮೃತ ಜ್ಯೋತಿ, ಕುಟೀರ ಜ್ಯೋತಿ ಯೋಜನೆಯನ್ನು ಗೃಹಜ್ಯೋತಿ ಯೋಜನೆಯಡಿ ಸೇರಿದ್ದೇವೆ. ಅವರಿಗೆ ಸರಾಸರಿ 58 ಯುನಿಟ್ ನೀಡಲಾಗುವುದು. ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಈ ಯೋಜನೆಗಳಲ್ಲಿ 38,966 ಕೋಟಿ ಹಣ ಬಾಕಿ ಉಳಿದಿತ್ತು. ಮಂಗಳೂರು , ಗುಲ್ಬರ್ಗಾ, ಚಾಮುಂಡೇಶ್ವರಿ ವಿದ್ಯುತ್ ಕಂಪನಿ ಸೇರಿದಂತೆ ಹಲವು ಕಂಪನಿಗಳಲ್ಲಿ ಬಾಕಿ ಉಳಿದಿತ್ತು. ಈ ಹಣವನ್ನ ಮನ್ನಾ ಮಾಡುತ್ತೇವೆ. ಅವರು ಬಾಕಿ ಕಟ್ಟಬೇಕಾದ ಅಗತ್ಯವಿಲ್ಲ ಎಂದಿದ್ದಾರೆ.
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…