ಬೆಂಗಳೂರು : ಇಂದಿನಿಂದ ಪಂಪ್ಸೆಟ್ಗಳಿಗೆ 7 ಗಂಟೆ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ 7 ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದ್ದೆ, ಈಗ 7 ಗಂಟೆ ವಿದ್ಯುತ್ ನೀಡಲು ನಿರ್ಧರಿಸಿದ್ದೇವೆ ಎಂದರು.
ರಾಯಚೂರು, ಬಳ್ಳಾರಿ, ಯಾದಗಿರಿ, ಕೊಪ್ಪಳದವರು ನಮಗೆ ಭತ್ತ ಬೆಳೆಯಲು 7 ಗಂಟೆ ವಿದ್ಯುತ್ ಕೊಡಿ ಅಂತಾ ಮನವಿ ಮಾಡಿದ್ದರು. ಮುಂಚೆ 5 ಗಂಟೆ ವಿದ್ಯುತ್ ಕೊಡುತ್ತಿದ್ದ ಪ್ರದೇಶದಲ್ಲೂ 7 ಗಂಟೆ ಕೊಡೋದಕ್ಕೆ ನಿರ್ಧಾರ ಮಾಡಿದ್ದೇವೆ. ರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಪವರ್ ಉತ್ಪಾದನೆಯಾಗ್ತಿದೆ ಎಂದಿದ್ದಾರೆ.
ಸೆಕ್ಷನ್ ಲೆವೆಲ್ ಉಪಯೋಗಿಸಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ಹೊರ ರಾಜ್ಯಗಳಿಗೆ ಕೊಡಬಾರದು ಅಂತಾ ನಿರ್ಧಾರ ಮಾಡಲಾಗಿದೆ. ವಿದ್ಯುತ್ ಖರೀದಿಗೂ ನಿರ್ಧರಿಸಲಾಗಿದೆ. ಕೈಗಾರಿಕೆಗಳಿಗೆ ಡೊಮೆಸ್ಟಿಕ್ ಪವರ್ ಕಟ್ ಇಲ್ಲ. ಪಂಪ್ಸೆಟ್ ಗೆ ನೀಡುವ ವಿದ್ಯುತ್ಗೆ ಸರ್ಕಾರವೇ ಸಬ್ಸಿಡಿ ನೀಡಲಿದೆ ಎಂದಿದ್ದಾರೆ. ಇದಕ್ಕಾಗಿ 12,100 ಕೋಟಿ ರೂಪಾಯಿಯನ್ನು ಬಜೆಟ್ನಲ್ಲಿ ಒದಗಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಗೃಹಜ್ಯೋತಿ ಬಂದ ಮೇಲೆ ಅಮೃತ ಜ್ಯೋತಿ, ಕುಟೀರ ಜ್ಯೋತಿ ಯೋಜನೆಯನ್ನು ಗೃಹಜ್ಯೋತಿ ಯೋಜನೆಯಡಿ ಸೇರಿದ್ದೇವೆ. ಅವರಿಗೆ ಸರಾಸರಿ 58 ಯುನಿಟ್ ನೀಡಲಾಗುವುದು. ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಈ ಯೋಜನೆಗಳಲ್ಲಿ 38,966 ಕೋಟಿ ಹಣ ಬಾಕಿ ಉಳಿದಿತ್ತು. ಮಂಗಳೂರು , ಗುಲ್ಬರ್ಗಾ, ಚಾಮುಂಡೇಶ್ವರಿ ವಿದ್ಯುತ್ ಕಂಪನಿ ಸೇರಿದಂತೆ ಹಲವು ಕಂಪನಿಗಳಲ್ಲಿ ಬಾಕಿ ಉಳಿದಿತ್ತು. ಈ ಹಣವನ್ನ ಮನ್ನಾ ಮಾಡುತ್ತೇವೆ. ಅವರು ಬಾಕಿ ಕಟ್ಟಬೇಕಾದ ಅಗತ್ಯವಿಲ್ಲ ಎಂದಿದ್ದಾರೆ.
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…