ಬೆಂಗಳೂರು: ಬೆಂಗಳೂರಿನಲ್ಲಿ 70 ಹೊಸ ಇಂದಿರಾ ಕ್ಯಾಂಟೀನ್ ಆರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಈಗಾಗಲೇ ನೀಡಲಾಗಿರುವ ಹೊಸ ಇಂದಿರಾ ಕ್ಯಾಂಟೀನ್ಗಳ ನಿರ್ಮಾಣಕ್ಕೆ ಆದಷ್ಟು ಬೇಗನೇ ಜಾಗ ಗುರುತಿಸಬೇಕು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ೭೦ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಆದಷ್ಟು ಬೇಗನೇ ಸ್ಥಳ ಗುರುತಿಸಿ, ಹೊಸ ಮೆನು ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಡಿಸಿ, ಸಿಇಓ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಚಿವರು ತಮ್ಮ ಇಲಾಖೆಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ೧೫ನೇ ಹಣಕಾಸು ಆಯೋಗದ ಅನುದಾನದಲ್ಲಿ ೩೩೮೦೩ ಕಾಮಗಾರಿಗಳು ಮಂಜೂರಾಗಿವೆ. ಯೋಜನೆಯಡಿ ಇದುವರೆಗೂ ೨೭೯೯ ಕೋಟಿ ರೂ ಬಿಡುಗಡೆಯಾಗಿದ್ದು, ೧೮೮೩ ಕೋಟಿ ರೂ ವೆಚ್ಚವಾಗಿದೆ. ಮುಂದಿನ ಎರಡು ವಾರಗಳ ಒಳಗಾಗಿ ಟೆಂಡರ್ ಕರೆದು ನಿಗದಿತ ಅವಧಿಯ ಒಳಗಾಗಿ ಅನುದಾನವನ್ನು ಪೂರ್ಣವಾಗಿ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಬೆಂಗಳೂರಿನಲ್ಲಿ ೭೦ ಹೊಸ ಇಂದಿರಾ ಕ್ಯಾಂಟೀನ್ ತೆರೆಯಲು ಈಗಾಗಲೇ ಯೋಚನೆ ಮಾಡಲಾಗಿದೆ. ಕ್ಯಾಂಟೀನ್ನ್ನು ಯಾವ ಯಾವ ಸ್ಥಳಗಳಲ್ಲಿ ತೆರೆಯಬೇಕು ಹಾಗೂ ಸರಿಯಾದ ಮೆನು ವ್ಯವಸ್ಥೆ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…