ಬೆಂಗಳೂರು: ಬೆಂಗಳೂರಿನಲ್ಲಿ 70 ಹೊಸ ಇಂದಿರಾ ಕ್ಯಾಂಟೀನ್ ಆರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಈಗಾಗಲೇ ನೀಡಲಾಗಿರುವ ಹೊಸ ಇಂದಿರಾ ಕ್ಯಾಂಟೀನ್ಗಳ ನಿರ್ಮಾಣಕ್ಕೆ ಆದಷ್ಟು ಬೇಗನೇ ಜಾಗ ಗುರುತಿಸಬೇಕು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ೭೦ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಆದಷ್ಟು ಬೇಗನೇ ಸ್ಥಳ ಗುರುತಿಸಿ, ಹೊಸ ಮೆನು ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಡಿಸಿ, ಸಿಇಓ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಚಿವರು ತಮ್ಮ ಇಲಾಖೆಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ೧೫ನೇ ಹಣಕಾಸು ಆಯೋಗದ ಅನುದಾನದಲ್ಲಿ ೩೩೮೦೩ ಕಾಮಗಾರಿಗಳು ಮಂಜೂರಾಗಿವೆ. ಯೋಜನೆಯಡಿ ಇದುವರೆಗೂ ೨೭೯೯ ಕೋಟಿ ರೂ ಬಿಡುಗಡೆಯಾಗಿದ್ದು, ೧೮೮೩ ಕೋಟಿ ರೂ ವೆಚ್ಚವಾಗಿದೆ. ಮುಂದಿನ ಎರಡು ವಾರಗಳ ಒಳಗಾಗಿ ಟೆಂಡರ್ ಕರೆದು ನಿಗದಿತ ಅವಧಿಯ ಒಳಗಾಗಿ ಅನುದಾನವನ್ನು ಪೂರ್ಣವಾಗಿ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಬೆಂಗಳೂರಿನಲ್ಲಿ ೭೦ ಹೊಸ ಇಂದಿರಾ ಕ್ಯಾಂಟೀನ್ ತೆರೆಯಲು ಈಗಾಗಲೇ ಯೋಚನೆ ಮಾಡಲಾಗಿದೆ. ಕ್ಯಾಂಟೀನ್ನ್ನು ಯಾವ ಯಾವ ಸ್ಥಳಗಳಲ್ಲಿ ತೆರೆಯಬೇಕು ಹಾಗೂ ಸರಿಯಾದ ಮೆನು ವ್ಯವಸ್ಥೆ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…