ಬೆಂಗಳೂರು: ಬೆಂಗಳೂರಿನಲ್ಲಿ 70 ಹೊಸ ಇಂದಿರಾ ಕ್ಯಾಂಟೀನ್ ಆರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಈಗಾಗಲೇ ನೀಡಲಾಗಿರುವ ಹೊಸ ಇಂದಿರಾ ಕ್ಯಾಂಟೀನ್ಗಳ ನಿರ್ಮಾಣಕ್ಕೆ ಆದಷ್ಟು ಬೇಗನೇ ಜಾಗ ಗುರುತಿಸಬೇಕು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ೭೦ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಆದಷ್ಟು ಬೇಗನೇ ಸ್ಥಳ ಗುರುತಿಸಿ, ಹೊಸ ಮೆನು ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಡಿಸಿ, ಸಿಇಓ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಚಿವರು ತಮ್ಮ ಇಲಾಖೆಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ೧೫ನೇ ಹಣಕಾಸು ಆಯೋಗದ ಅನುದಾನದಲ್ಲಿ ೩೩೮೦೩ ಕಾಮಗಾರಿಗಳು ಮಂಜೂರಾಗಿವೆ. ಯೋಜನೆಯಡಿ ಇದುವರೆಗೂ ೨೭೯೯ ಕೋಟಿ ರೂ ಬಿಡುಗಡೆಯಾಗಿದ್ದು, ೧೮೮೩ ಕೋಟಿ ರೂ ವೆಚ್ಚವಾಗಿದೆ. ಮುಂದಿನ ಎರಡು ವಾರಗಳ ಒಳಗಾಗಿ ಟೆಂಡರ್ ಕರೆದು ನಿಗದಿತ ಅವಧಿಯ ಒಳಗಾಗಿ ಅನುದಾನವನ್ನು ಪೂರ್ಣವಾಗಿ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಬೆಂಗಳೂರಿನಲ್ಲಿ ೭೦ ಹೊಸ ಇಂದಿರಾ ಕ್ಯಾಂಟೀನ್ ತೆರೆಯಲು ಈಗಾಗಲೇ ಯೋಚನೆ ಮಾಡಲಾಗಿದೆ. ಕ್ಯಾಂಟೀನ್ನ್ನು ಯಾವ ಯಾವ ಸ್ಥಳಗಳಲ್ಲಿ ತೆರೆಯಬೇಕು ಹಾಗೂ ಸರಿಯಾದ ಮೆನು ವ್ಯವಸ್ಥೆ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…