ರಾಜ್ಯ

7 ಸಾವಿರ ರಸ್ತೆ ಗುಂಡಿ ಮುಚ್ಚಿದ್ದು, 5 ಸಾವಿರ ಗುಂಡಿ ಬಾಕಿ ಇವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಗರದಲ್ಲಿ ಭಾರೀ ಪ್ರಮಾಣದ ಸಂಚಾರ ದಟ್ಟಣೆ ಹಾಗೂ ವ್ಯಾಪಕ ಮಳೆಯಿಂದಾಗಿ ರಸ್ತೆ ಗುಂಡಿಗಳು ಸೃಷ್ಟಿಯಾಗುತ್ತಿವೆ. ಈಗಾಗಲೇ 7 ಸಾವಿರ ಗುಂಡಿಗಳನ್ನು ಮುಚ್ಚಲಾಗಿದ್ದು, ಇನ್ನೂ 5 ಸಾವಿರ ಗುಂಡಿಗಳು ಬಾಕಿ ಇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಸೃಷ್ಟಿಯಾಗಬೇಕೆಂದು ಯಾರೂ ಬಯಸುವುದಿಲ್ಲ, ಹೆಚ್ಚಿನ ವಾಹನಗಳ ಸಂಚಾರ ಹಾಗೂ ನಿಸರ್ಗದತ್ತವಾಗಿ ನಿರಂತರ ಮಳೆಯಿಂದ ಗುಂಡಿಗಳಾಗುತ್ತಿವೆ. ಸರ್ಕಾರ ಸಮಸ್ಯೆಯನ್ನು ಸರಿಪಡಿಸುವ ಸಲುವಾಗಿಯೇ ಶ್ರಮಿಸುತ್ತದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಸಂಜೆ ಕೂಡ ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸಭೆ ನಡೆಸುತ್ತಿದ್ದಾರೆ. ರಸ್ತೆ ಗುಂಡಿಗಳನ್ನು ಗುರುತಿಸಲು ಪೊಲೀಸ್ ಆಯುಕ್ತರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಸಾರ್ವಜನಿಕರೂ ಕೂಡ ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಬಿಜೆಪಿಯವರಿಗೆ ರಾಜಕೀಯ ಮಾಡುವುದೇ ಪ್ರಮುಖ ಉದ್ದೇಶವಾಗಿದೆ. ಅದನ್ನು ಬಿಟ್ಟು ಅವರಿಗೆ ಬೇರೇನೂ ಗೊತ್ತಿಲ್ಲ. ಅವರು ಏನೂ ಬೇಕಾದರೂ ಮಾಡಿಕೊಳ್ಳಲಿ, ನಾವಂತೂ ಯಾವುದೇ ತಾರತಮ್ಯ ಮಾಡಿಲ್ಲ. ಎಲ್ಲಾ ಶಾಸಕರಿಗೂ ಸಮಾನವಾಗಿ ಅನುದಾನ ಹಂಚುತ್ತಿದ್ದೇವೆ. ನನ್ನ ವಿವೇಚನಾಕಾರಿಯಲ್ಲಿರುವ ಅನುದಾನವನ್ನು ಸಮನಾಂತರವಾಗಿಯೇ ನೀಡುತ್ತಿದ್ದೇನೆ. ಅದನ್ನು ಬಳಸಿಕೊಂಡು ಕೆಲಸ ಮಾಡಲಿ, ಹಣ ಇಲ್ಲವೆಂಬ ಅಭಿಪ್ರಾಯವನ್ನು ಏಕೆ ವ್ಯಕ್ತಪಡಿಸುತ್ತಿದ್ದಾರೆ. ಶಾಸಕರಿಗೆ 25 ಕೋಟಿ ರೂ.ಗೂ ಹೆಚ್ಚಿನ ಹಣ ನೀಡಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

1 hour ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

2 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

2 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

2 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

2 hours ago