ರಾಜ್ಯ

7 ಸಾವಿರ ರಸ್ತೆ ಗುಂಡಿ ಮುಚ್ಚಿದ್ದು, 5 ಸಾವಿರ ಗುಂಡಿ ಬಾಕಿ ಇವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಗರದಲ್ಲಿ ಭಾರೀ ಪ್ರಮಾಣದ ಸಂಚಾರ ದಟ್ಟಣೆ ಹಾಗೂ ವ್ಯಾಪಕ ಮಳೆಯಿಂದಾಗಿ ರಸ್ತೆ ಗುಂಡಿಗಳು ಸೃಷ್ಟಿಯಾಗುತ್ತಿವೆ. ಈಗಾಗಲೇ 7 ಸಾವಿರ ಗುಂಡಿಗಳನ್ನು ಮುಚ್ಚಲಾಗಿದ್ದು, ಇನ್ನೂ 5 ಸಾವಿರ ಗುಂಡಿಗಳು ಬಾಕಿ ಇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಸೃಷ್ಟಿಯಾಗಬೇಕೆಂದು ಯಾರೂ ಬಯಸುವುದಿಲ್ಲ, ಹೆಚ್ಚಿನ ವಾಹನಗಳ ಸಂಚಾರ ಹಾಗೂ ನಿಸರ್ಗದತ್ತವಾಗಿ ನಿರಂತರ ಮಳೆಯಿಂದ ಗುಂಡಿಗಳಾಗುತ್ತಿವೆ. ಸರ್ಕಾರ ಸಮಸ್ಯೆಯನ್ನು ಸರಿಪಡಿಸುವ ಸಲುವಾಗಿಯೇ ಶ್ರಮಿಸುತ್ತದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಸಂಜೆ ಕೂಡ ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸಭೆ ನಡೆಸುತ್ತಿದ್ದಾರೆ. ರಸ್ತೆ ಗುಂಡಿಗಳನ್ನು ಗುರುತಿಸಲು ಪೊಲೀಸ್ ಆಯುಕ್ತರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಸಾರ್ವಜನಿಕರೂ ಕೂಡ ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಬಿಜೆಪಿಯವರಿಗೆ ರಾಜಕೀಯ ಮಾಡುವುದೇ ಪ್ರಮುಖ ಉದ್ದೇಶವಾಗಿದೆ. ಅದನ್ನು ಬಿಟ್ಟು ಅವರಿಗೆ ಬೇರೇನೂ ಗೊತ್ತಿಲ್ಲ. ಅವರು ಏನೂ ಬೇಕಾದರೂ ಮಾಡಿಕೊಳ್ಳಲಿ, ನಾವಂತೂ ಯಾವುದೇ ತಾರತಮ್ಯ ಮಾಡಿಲ್ಲ. ಎಲ್ಲಾ ಶಾಸಕರಿಗೂ ಸಮಾನವಾಗಿ ಅನುದಾನ ಹಂಚುತ್ತಿದ್ದೇವೆ. ನನ್ನ ವಿವೇಚನಾಕಾರಿಯಲ್ಲಿರುವ ಅನುದಾನವನ್ನು ಸಮನಾಂತರವಾಗಿಯೇ ನೀಡುತ್ತಿದ್ದೇನೆ. ಅದನ್ನು ಬಳಸಿಕೊಂಡು ಕೆಲಸ ಮಾಡಲಿ, ಹಣ ಇಲ್ಲವೆಂಬ ಅಭಿಪ್ರಾಯವನ್ನು ಏಕೆ ವ್ಯಕ್ತಪಡಿಸುತ್ತಿದ್ದಾರೆ. ಶಾಸಕರಿಗೆ 25 ಕೋಟಿ ರೂ.ಗೂ ಹೆಚ್ಚಿನ ಹಣ ನೀಡಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

2 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

2 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

2 hours ago

ಓದುಗರ ಪತ್ರ: ರೈಲು ಟಿಕೆಟ್ ಕಾಯ್ದಿರಿಸುವ ಸ್ಥಳದಲ್ಲಿ ಕೆಲಸ ಮಾಡದ ಎಸಿ

ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…

2 hours ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ರಕ್ಷಣೆ ನೀಡಿ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರಮಂದಿರಗಳನ್ನು ಉಳಿಸಲು ಚಿತ್ರೋದ್ಯಮ ಹುಡುಕುತ್ತಿದೆ ದಾರಿ

ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…

2 hours ago