DK Shivakumar
ಬೆಂಗಳೂರು: ನಗರದಲ್ಲಿ ಭಾರೀ ಪ್ರಮಾಣದ ಸಂಚಾರ ದಟ್ಟಣೆ ಹಾಗೂ ವ್ಯಾಪಕ ಮಳೆಯಿಂದಾಗಿ ರಸ್ತೆ ಗುಂಡಿಗಳು ಸೃಷ್ಟಿಯಾಗುತ್ತಿವೆ. ಈಗಾಗಲೇ 7 ಸಾವಿರ ಗುಂಡಿಗಳನ್ನು ಮುಚ್ಚಲಾಗಿದ್ದು, ಇನ್ನೂ 5 ಸಾವಿರ ಗುಂಡಿಗಳು ಬಾಕಿ ಇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಸೃಷ್ಟಿಯಾಗಬೇಕೆಂದು ಯಾರೂ ಬಯಸುವುದಿಲ್ಲ, ಹೆಚ್ಚಿನ ವಾಹನಗಳ ಸಂಚಾರ ಹಾಗೂ ನಿಸರ್ಗದತ್ತವಾಗಿ ನಿರಂತರ ಮಳೆಯಿಂದ ಗುಂಡಿಗಳಾಗುತ್ತಿವೆ. ಸರ್ಕಾರ ಸಮಸ್ಯೆಯನ್ನು ಸರಿಪಡಿಸುವ ಸಲುವಾಗಿಯೇ ಶ್ರಮಿಸುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಸಂಜೆ ಕೂಡ ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸಭೆ ನಡೆಸುತ್ತಿದ್ದಾರೆ. ರಸ್ತೆ ಗುಂಡಿಗಳನ್ನು ಗುರುತಿಸಲು ಪೊಲೀಸ್ ಆಯುಕ್ತರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಸಾರ್ವಜನಿಕರೂ ಕೂಡ ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಬಿಜೆಪಿಯವರಿಗೆ ರಾಜಕೀಯ ಮಾಡುವುದೇ ಪ್ರಮುಖ ಉದ್ದೇಶವಾಗಿದೆ. ಅದನ್ನು ಬಿಟ್ಟು ಅವರಿಗೆ ಬೇರೇನೂ ಗೊತ್ತಿಲ್ಲ. ಅವರು ಏನೂ ಬೇಕಾದರೂ ಮಾಡಿಕೊಳ್ಳಲಿ, ನಾವಂತೂ ಯಾವುದೇ ತಾರತಮ್ಯ ಮಾಡಿಲ್ಲ. ಎಲ್ಲಾ ಶಾಸಕರಿಗೂ ಸಮಾನವಾಗಿ ಅನುದಾನ ಹಂಚುತ್ತಿದ್ದೇವೆ. ನನ್ನ ವಿವೇಚನಾಕಾರಿಯಲ್ಲಿರುವ ಅನುದಾನವನ್ನು ಸಮನಾಂತರವಾಗಿಯೇ ನೀಡುತ್ತಿದ್ದೇನೆ. ಅದನ್ನು ಬಳಸಿಕೊಂಡು ಕೆಲಸ ಮಾಡಲಿ, ಹಣ ಇಲ್ಲವೆಂಬ ಅಭಿಪ್ರಾಯವನ್ನು ಏಕೆ ವ್ಯಕ್ತಪಡಿಸುತ್ತಿದ್ದಾರೆ. ಶಾಸಕರಿಗೆ 25 ಕೋಟಿ ರೂ.ಗೂ ಹೆಚ್ಚಿನ ಹಣ ನೀಡಲಾಗಿದೆ ಎಂದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…