ರಾಜ್ಯ

7 ಸಾವಿರ ರಸ್ತೆ ಗುಂಡಿ ಮುಚ್ಚಿದ್ದು, 5 ಸಾವಿರ ಗುಂಡಿ ಬಾಕಿ ಇವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಗರದಲ್ಲಿ ಭಾರೀ ಪ್ರಮಾಣದ ಸಂಚಾರ ದಟ್ಟಣೆ ಹಾಗೂ ವ್ಯಾಪಕ ಮಳೆಯಿಂದಾಗಿ ರಸ್ತೆ ಗುಂಡಿಗಳು ಸೃಷ್ಟಿಯಾಗುತ್ತಿವೆ. ಈಗಾಗಲೇ 7 ಸಾವಿರ ಗುಂಡಿಗಳನ್ನು ಮುಚ್ಚಲಾಗಿದ್ದು, ಇನ್ನೂ 5 ಸಾವಿರ ಗುಂಡಿಗಳು ಬಾಕಿ ಇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಸೃಷ್ಟಿಯಾಗಬೇಕೆಂದು ಯಾರೂ ಬಯಸುವುದಿಲ್ಲ, ಹೆಚ್ಚಿನ ವಾಹನಗಳ ಸಂಚಾರ ಹಾಗೂ ನಿಸರ್ಗದತ್ತವಾಗಿ ನಿರಂತರ ಮಳೆಯಿಂದ ಗುಂಡಿಗಳಾಗುತ್ತಿವೆ. ಸರ್ಕಾರ ಸಮಸ್ಯೆಯನ್ನು ಸರಿಪಡಿಸುವ ಸಲುವಾಗಿಯೇ ಶ್ರಮಿಸುತ್ತದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಸಂಜೆ ಕೂಡ ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸಭೆ ನಡೆಸುತ್ತಿದ್ದಾರೆ. ರಸ್ತೆ ಗುಂಡಿಗಳನ್ನು ಗುರುತಿಸಲು ಪೊಲೀಸ್ ಆಯುಕ್ತರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಸಾರ್ವಜನಿಕರೂ ಕೂಡ ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಬಿಜೆಪಿಯವರಿಗೆ ರಾಜಕೀಯ ಮಾಡುವುದೇ ಪ್ರಮುಖ ಉದ್ದೇಶವಾಗಿದೆ. ಅದನ್ನು ಬಿಟ್ಟು ಅವರಿಗೆ ಬೇರೇನೂ ಗೊತ್ತಿಲ್ಲ. ಅವರು ಏನೂ ಬೇಕಾದರೂ ಮಾಡಿಕೊಳ್ಳಲಿ, ನಾವಂತೂ ಯಾವುದೇ ತಾರತಮ್ಯ ಮಾಡಿಲ್ಲ. ಎಲ್ಲಾ ಶಾಸಕರಿಗೂ ಸಮಾನವಾಗಿ ಅನುದಾನ ಹಂಚುತ್ತಿದ್ದೇವೆ. ನನ್ನ ವಿವೇಚನಾಕಾರಿಯಲ್ಲಿರುವ ಅನುದಾನವನ್ನು ಸಮನಾಂತರವಾಗಿಯೇ ನೀಡುತ್ತಿದ್ದೇನೆ. ಅದನ್ನು ಬಳಸಿಕೊಂಡು ಕೆಲಸ ಮಾಡಲಿ, ಹಣ ಇಲ್ಲವೆಂಬ ಅಭಿಪ್ರಾಯವನ್ನು ಏಕೆ ವ್ಯಕ್ತಪಡಿಸುತ್ತಿದ್ದಾರೆ. ಶಾಸಕರಿಗೆ 25 ಕೋಟಿ ರೂ.ಗೂ ಹೆಚ್ಚಿನ ಹಣ ನೀಡಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

11 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

12 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

12 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

12 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

13 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

21 hours ago