DK Shivakumar
ಬೆಂಗಳೂರು: ನಗರದಲ್ಲಿ ಭಾರೀ ಪ್ರಮಾಣದ ಸಂಚಾರ ದಟ್ಟಣೆ ಹಾಗೂ ವ್ಯಾಪಕ ಮಳೆಯಿಂದಾಗಿ ರಸ್ತೆ ಗುಂಡಿಗಳು ಸೃಷ್ಟಿಯಾಗುತ್ತಿವೆ. ಈಗಾಗಲೇ 7 ಸಾವಿರ ಗುಂಡಿಗಳನ್ನು ಮುಚ್ಚಲಾಗಿದ್ದು, ಇನ್ನೂ 5 ಸಾವಿರ ಗುಂಡಿಗಳು ಬಾಕಿ ಇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಸೃಷ್ಟಿಯಾಗಬೇಕೆಂದು ಯಾರೂ ಬಯಸುವುದಿಲ್ಲ, ಹೆಚ್ಚಿನ ವಾಹನಗಳ ಸಂಚಾರ ಹಾಗೂ ನಿಸರ್ಗದತ್ತವಾಗಿ ನಿರಂತರ ಮಳೆಯಿಂದ ಗುಂಡಿಗಳಾಗುತ್ತಿವೆ. ಸರ್ಕಾರ ಸಮಸ್ಯೆಯನ್ನು ಸರಿಪಡಿಸುವ ಸಲುವಾಗಿಯೇ ಶ್ರಮಿಸುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಸಂಜೆ ಕೂಡ ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸಭೆ ನಡೆಸುತ್ತಿದ್ದಾರೆ. ರಸ್ತೆ ಗುಂಡಿಗಳನ್ನು ಗುರುತಿಸಲು ಪೊಲೀಸ್ ಆಯುಕ್ತರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಸಾರ್ವಜನಿಕರೂ ಕೂಡ ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಬಿಜೆಪಿಯವರಿಗೆ ರಾಜಕೀಯ ಮಾಡುವುದೇ ಪ್ರಮುಖ ಉದ್ದೇಶವಾಗಿದೆ. ಅದನ್ನು ಬಿಟ್ಟು ಅವರಿಗೆ ಬೇರೇನೂ ಗೊತ್ತಿಲ್ಲ. ಅವರು ಏನೂ ಬೇಕಾದರೂ ಮಾಡಿಕೊಳ್ಳಲಿ, ನಾವಂತೂ ಯಾವುದೇ ತಾರತಮ್ಯ ಮಾಡಿಲ್ಲ. ಎಲ್ಲಾ ಶಾಸಕರಿಗೂ ಸಮಾನವಾಗಿ ಅನುದಾನ ಹಂಚುತ್ತಿದ್ದೇವೆ. ನನ್ನ ವಿವೇಚನಾಕಾರಿಯಲ್ಲಿರುವ ಅನುದಾನವನ್ನು ಸಮನಾಂತರವಾಗಿಯೇ ನೀಡುತ್ತಿದ್ದೇನೆ. ಅದನ್ನು ಬಳಸಿಕೊಂಡು ಕೆಲಸ ಮಾಡಲಿ, ಹಣ ಇಲ್ಲವೆಂಬ ಅಭಿಪ್ರಾಯವನ್ನು ಏಕೆ ವ್ಯಕ್ತಪಡಿಸುತ್ತಿದ್ದಾರೆ. ಶಾಸಕರಿಗೆ 25 ಕೋಟಿ ರೂ.ಗೂ ಹೆಚ್ಚಿನ ಹಣ ನೀಡಲಾಗಿದೆ ಎಂದರು.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…