ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಸುಮಾರು ಶೇ.73 ರಷ್ಟು ಆನ್ ಲೈನ್ ಉದ್ಯೋಗ ವಂಚನೆ ಪ್ರಕರಣಗಳು ಹೆಚ್ಚಾಗಿ ಬೆಂಗಳೂರಿನಲ್ಲಿ ಕಂಡು ಬಂದಿರೋದು ಒಂದು ರೀತಿ ಆತಂಕವನ್ನುಂಟು ಮಾಡಿದೆ.
ಕರ್ನಾಟಕದಲ್ಲಿ 2020 ರಿಂದ ವರದಿಯಾದ ರಾಜ್ಯ ಅಪರಾಧ ದಾಖಲೆಗಳ ಬ್ಯೂರೋ ದತ್ತಾಂಶಗಳ ಪ್ರಕಾರ ಆನ್ ಲೈನ್ ಉದ್ಯೋಗ ವಂಚನೆಗಳಲ್ಲಿ ಸುಮಾರು ಶೇ 73 ರಷ್ಟು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲೇ ಬೆಳಕಿಗೆ ಬಂದಿವೆ. ವಂಚನೆಗೆ ಒಳಗಾದವರಲ್ಲಿ ಟೆಕ್ಕಿಗಳು ಮತ್ತು ವಿದ್ಯಾರ್ಥಿಗಳು ಶೇ.20 ರಿಂದ 30 ರಷ್ಟು ಇದ್ದರೆ, ಉಳಿದವರು ನಿರುದ್ಯೋಗಿಗಳು ಮತ್ತು ಪವೀಧರರು ಎಂಬುವುದು ತಿಳಿದುಬಂದಿದೆ.
ಕಳೆದ ಐದು ವರ್ಷಗಳಿಂದಲೂ ಕೂಡ ಕರ್ನಾಟಕದಲ್ಲಿ ಆನ್ ಲೈನ್ ಉದ್ಯೋಗ ವಂಚನೆಗಳ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಾ ಹೋಗುತ್ತಿವೆ. 2020ರ ಜನವರಿ 1 ಹಾಗೂ 2024 ರ ಮೇ25 ರ ನಡುವೆ ಒಟ್ಟು 9,479 ವಂಚನೆ ಪ್ರಕರಣಗಳು ದಾಖಲಾಗಿದ್ದವು. ಇವುಗಳಲ್ಲಿ 6,905 ಪ್ರಕರಣಗಳು ಬೆಂಗಳೂರು ನಗರದಲ್ಲೇ ವರದಿಯಾಗಿವೆ ಎಂಬ ಅಂಕಿ ಅಂಶಗಳು ಗೊತ್ತಾಗಿವೆ. ಕಳೆದ ವರ್ಷ 4,098 ಪ್ರಕರಣಗಳು ವರದಿಯಾಗಿದ್ದವು. ಆದರೆ ಈ ವರ್ಷ ಕಳೆದ ವರ್ಷದ ಅರ್ಧಕ್ಕಿಂತಲೂ ಹೆಚ್ಚು ಅಂದರೆ 2,185 ವರದಿಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…