ರಾಜ್ಯ

ಬೆಂಗಳೂರಿನಲ್ಲೇ ಶೇ.73 ರಷ್ಟು ಆನ್‌ ಲೈನ್ ಉದ್ಯೋಗ ವಂಚನೆ..!

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್‌ ಲೈನ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಸುಮಾರು ಶೇ.73 ರಷ್ಟು ಆನ್‌ ಲೈನ್ ಉದ್ಯೋಗ ವಂಚನೆ ಪ್ರಕರಣಗಳು ಹೆಚ್ಚಾಗಿ ಬೆಂಗಳೂರಿನಲ್ಲಿ ಕಂಡು ಬಂದಿರೋದು ಒಂದು ರೀತಿ ಆತಂಕವನ್ನುಂಟು ಮಾಡಿದೆ.

ಕರ್ನಾಟಕದಲ್ಲಿ 2020 ರಿಂದ ವರದಿಯಾದ ರಾಜ್ಯ ಅಪರಾಧ ದಾಖಲೆಗಳ ಬ್ಯೂರೋ ದತ್ತಾಂಶಗಳ ಪ್ರಕಾರ ಆನ್‌ ಲೈನ್ ಉದ್ಯೋಗ ವಂಚನೆಗಳಲ್ಲಿ ಸುಮಾರು ಶೇ 73 ರಷ್ಟು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲೇ ಬೆಳಕಿಗೆ ಬಂದಿವೆ. ವಂಚನೆಗೆ ಒಳಗಾದವರಲ್ಲಿ ಟೆಕ್ಕಿಗಳು ಮತ್ತು ವಿದ್ಯಾರ್ಥಿಗಳು ಶೇ.20 ರಿಂದ 30 ರಷ್ಟು ಇದ್ದರೆ, ಉಳಿದವರು ನಿರುದ್ಯೋಗಿಗಳು ಮತ್ತು ಪವೀಧರರು ಎಂಬುವುದು ತಿಳಿದುಬಂದಿದೆ.

ಕಳೆದ ಐದು ವರ್ಷಗಳಿಂದಲೂ ಕೂಡ ಕರ್ನಾಟಕದಲ್ಲಿ ಆನ್‌ ಲೈನ್ ಉದ್ಯೋಗ ವಂಚನೆಗಳ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಾ ಹೋಗುತ್ತಿವೆ. 2020ರ ಜನವರಿ 1 ಹಾಗೂ 2024 ರ ಮೇ25 ರ ನಡುವೆ ಒಟ್ಟು 9,479 ವಂಚನೆ ಪ್ರಕರಣಗಳು ದಾಖಲಾಗಿದ್ದವು. ಇವುಗಳಲ್ಲಿ 6,905 ಪ್ರಕರಣಗಳು ಬೆಂಗಳೂರು ನಗರದಲ್ಲೇ ವರದಿಯಾಗಿವೆ ಎಂಬ ಅಂಕಿ ಅಂಶಗಳು ಗೊತ್ತಾಗಿವೆ. ಕಳೆದ ವರ್ಷ 4,098 ಪ್ರಕರಣಗಳು ವರದಿಯಾಗಿದ್ದವು. ಆದರೆ ಈ ವರ್ಷ ಕಳೆದ ವರ್ಷದ ಅರ್ಧಕ್ಕಿಂತಲೂ ಹೆಚ್ಚು ಅಂದರೆ 2,185 ವರದಿಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

9 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

9 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

10 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

10 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

11 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

12 hours ago