Categories: ರಾಜ್ಯ

ರಾಜ್ಯ ರೈಲ್ವೆಗೆ ಕೇಂದ್ರ ಸರ್ಕಾರದಿಂದ 7,750 ಕೋಟಿ ರೂ ಅನುದಾನ ಬಿಡುಗಡೆ: ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ

ತಿಪಟೂರು: ರಾಜ್ಯ ರೈಲ್ವೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 7,750 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ  ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಇಂದು ಕೆ.ಎಸ್‌.ಆರ್‌ ಬೆಂಗಳೂರು-ಶಿವಮೊಗ್ಗ ಟೌನ್‌ ಜನ ಶತಾಬ್ದಿ ಎಕ್ಸ್‌ಪ್ರೆಸ್‌ ಹಾಗೂ ಕೆ.ಎಸ್‌.ಆರ್‌ ಬೆಂಗಳೂರು-ಎಸ್‌.ಎಸ್‌.ಎಸ್‌. ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್‌ ರೈಲುಗಳಿಗೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ ತೋರಿ ಮಾತನಾಡಿದರು.

ದೇಶದಲ್ಲಿ ಅಧಿಕಾರದಲ್ಲಿದ್ದ ಹಿಂದಿನ ಯುಪಿಎ ಸರ್ಕಾರ ರಾಜ್ಯದ ರೈಲ್ವೆ ಅಭಿವೃದ್ಧಿಗೆ ಕೇವಲ 830 ಕೋಟಿ ರೂಪಾಯಿಗಳನ್ನು ಅನುದಾನ ನೀಡಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ 7,750 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿ ರೈಲ್ವೆ ಅಭಿವೃದ್ಧಿಗೆ ಪ್ರೋತ್ಸಾಹ ನೀಡುತ್ತಿದೆ.

ದೇಶದಲ್ಲಿರುವ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ. ಅನುದಾನವನ್ನು ಯಾವ ರೀತಿಯಲ್ಲಿ ಲೆಕ್ಕಾಚಾರ ಮಾಡಿ ಕಾರ್ಯಗತವಾಗಿ ತರಬೇಕು ಎಂಬುದರ ಬಗ್ಗೆ ಚಿಂತಿಸಲಾಗುತ್ತಿದೆ. ಅಲ್ಲದೇ ದೇಶದ್ಯಾಂತ 39,000 ಕೋಟಿ ರೂಪಾಯಿಗಳನ್ನು ವೆಚ್ಚಮಾಡಿ ಹೊಸದಾಗಿ 11 ಕಾಮಗಾರಿಗಳನ್ನು ಆರಂಭಿಸಿದೆ. ಆರು ತಿಂಗಳಲ್ಲಿ ಸಾವಿರ ಕೋಟಿಗೂ ಹೆಚ್ಚು ಅನುದಾನಗಳು ಬಿಡುಗಡೆಯಾಗಿದ್ದು, ರೈಲ್ವೆ ಮಾರ್ಗಗಳಲ್ಲಿ ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ಕಾಮಗಾರಿಗಳು ಕಾರ್ಯಗತವಾಗಿವೆ. ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳಲ್ಲಿ ಕಾರಣಾಂತರಗಳಿಂದ ವಿಳಂಬವಾಗಿ ಸ್ಥಗಿತಗೊಂಡಿರುವ ಕಾರಣ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಈ ಮಾಹಿತಿಯ ಆಧಾರದ ಮೇಲೆ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಶೀಘ್ರವಾಗಿ ತ್ವರಿತಗತಿಯಲ್ಲಿ ಮುಕ್ತಾಯಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

6 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

6 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

6 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

6 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

6 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

6 hours ago