ರಾಜ್ಯ

ಜೂನ್‌7ರಿಂದ 9ರವರೆಗೆ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: ಜೂನ್ 7 ರಿಂದ 9 ರವರೆಗೆ 3 ದಿನಗಳ ಕಾಲ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುವುದು ಎಂದು ಜಿಲ್ಲಾ ಉಸುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಈ ಹಿಂದೆ 1974ರಲ್ಲಿ ಮೊದಲನೇ ಬಾರಿಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿರುತ್ತದೆ. ಎರಡನೇ ಬಾರಿಗೆ 1994 `ರಲ್ಲಿ ನಡೆದಿದೆ. ಈ ಐತಿಹಾಸಿಕ ಸಮ್ಮೇಳನವನ್ನು ನಡೆಸಿದ್ದರಿಂದ ಜಿಲ್ಲೆಯಲ್ಲಿ 3ನೇ ಬಾರಿಗೆ 30 ವಷಗಳ ನಂತರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಅವಕಾಶ ಸಿಕ್ಕಿರುವುದು ಮಂಡ್ಯ ಜಿಲ್ಲೆಯ ಸೌಭಾಗ್ಯವಾಗಿದೆ ಎಂದರು.

ಸಮ್ಮೇಳನ ಯಶಸ್ವಿಯಾಗಿ ನಡೆಸಲು ಜಿಲ್ಲೆಯ ಹಿರಿಯ ಸಾಹಿತಿಗಳು ಕನ್ನಡ ಅಭಿಮಾನಿಗಳು ಸಾಹಿತ್ಯ ಪ್ರೇಮಿಗಳು ಜನಪ್ರತಿನಿಧಿಗಳು ಹಿರಿಯ ಸಾಹಿತ್ಯಾಸಕ್ತರ ಪಾಲ್ಗೊಳ್ಳುವಿಕೆ ಅಮೂಲ್ಯವಾಗಿದೆ. ಈ ನಿಟ್ಟಿನಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ತು, ಕೇಂದ್ರ ಸಾಹಿತ್ಯ ಪರಿಷತ್ತಿನ ಸಲಹೆಗಳೊಂದಿಗೆ ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸಲು ಎಲ್ಲರನ್ನೂ ಒಳಗೊಂಡಂತೆ 25 ಸಮಿತಿಗಳನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದರು.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಮಕ್ಷಮದಲ್ಲಿ ಸಮ್ಮೇಳನ ನಡೆಸಲು ಸೂಕ್ತ ಸ್ಥಳವನ್ನು ಅಂತಿಮಗೊಳಿಸಲಾಗುವುದು. ಮುಖ್ಯಮಂತ್ರಿಗಳು ಸಮ್ಮೇಳನದ ವೆಚ್ಚವನ್ನು ಬಿಡುಗಡೆ ಮಾಡಲು ಭರವಸೆ ನೀಡಿದ್ದಾರೆ. ಅದರಂತೆ ವಿವಿಧ ಸಮಿತಿಗಳ ನೇಮಕಮಾಡಿ ಸಮಿತಿಗಳು ಆಂತರಿಕವಾಗಿ ಸಭೆ ನಡೆಸಿ ಅಂತಿಮವಾಗಿ ಆಗಬಹುದಾದ ವೆಚ್ಚದ ಅಂದಾಜು ಮೊತ್ತವನ್ನು ಮಖ್ಯ ಸಮಿತಿಗೆ ಸಲ್ಲಿಸುತ್ತಾರೆ ಎಂದರು.

ಸಮ್ಮೇಳನದಲ್ಲಿ ಸ್ವಾಗತ ಸಮಿತಿ, ಸಮನ್ವಯ ಸಮಿತಿ, ಹಣಕಾಸು ಮತ್ತು ಲೆಕ್ಕ ಪರಿಶೋಧನಾ ಸಮಿತಿ, ವೇದಿಕೆ ಸಮಿತಿ, ಆಹಾರ ಮತ್ತು ಮೆರವಣಿಗೆ, ವಸತಿ, ಆರೋಗ್ಯ ಮತ್ತು ನೈರ್ಮಲ್ಯ ಸಾಂಸ್ಕೃತಿಕ ಸಾರಿಗೆ, ನಗರ ಅಲಂಕಾರ ವಿದ್ಯುತ್, ಪುಸ್ತಕ ಬಿಡುಗಡೆ, ಪ್ರಚಾರ, ಆಮಂತ್ರಣ, ಸ್ಮರಣಿಕೆ, ಮಾಧ್ಯಮ ಮತ್ತು ಶಿಷ್ಟಾಚಾರ ಸೇರಿದಂತೆ ೨೫ ಸಮಿತಿಗಳನ್ನು ರಚಿಸಲಾಗುವುದು ಎಂದರು.

ಸಮ್ಮೇಳನದಲ್ಲಿ ಕವಿಗೋಷ್ಠಿ ಉಪನ್ಯಾಸ, ಪುಸ್ತಕ ಮಳಿಗೆ ಆಯೋಜಿಸಲು ಹಾಗೂ ಪ್ರತಿನಿತ್ಯ ಸಮ್ಮೇಳನ ಸುಮಾರು 3 ರಿಂದ 4 ಲಕ್ಷ ಜನ ಸೇರುವ ನಿರೀಕ್ಷೆ ಇದ್ದು ವಸತಿ ಹಾಗೂ ಊಟದ ವ್ಯವಸ್ಥೆಗೆ ಯೋಜಿಸಲಾಗಿದೆ ಎಂದರು. ಸಭೆಯಲ್ಲಿ ಶಾಸಕ ಪಿ.ರವಿಕುಮಾ‌ರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಸಿಇಒ ಶೇಖ್ ತನ್ನೀ‌ರ್ ಆಸಿಫ್, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago