ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು ಹೊಲ ಮೇಯ್ದಂತಿದೆ.
ಈ ಬಗ್ಗೆ ವಿಧಾನಪರಿಷತ್ನಲ್ಲಿ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದು, ಮೂರು ವರ್ಷಗಳಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ ಎಂದಿದ್ದಾರೆ.
ಇದನ್ನು ಓದಿ: ಪಾರಿವಾಳದ ಮಲ-ಮೂತ್ರದಿಂದ ಜನರಿಗೆ ಉಸಿರಾಟದ ತೊಂದರೆ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ
ಗೃಹ ಸಚಿವರು ಅಂಕಿ-ಅಂಶಗಳ ಸಮೇತ ವಿವರಿಸುತ್ತಿದ್ದಂತೆ ಶಾಸಕರ ಶರವಣ ಆತಂಕ ವ್ಯಕ್ತಪಡಿಸಿದ್ದು, ಇದು ಬೇಲಿಯೇ ಎದ್ದು ಹೊಸ ಮೇಯ್ದ ಕಥೆಯಾಗಿದೆ. ರಕ್ಷಕರೇ ಭಕ್ಷಕರಾಗುತ್ತಿದ್ದಂತೆ ಇದೆ. ಈ ರೀತಿಯಾದರೆ ಪೊಲೀಸರ ಮೇಳೆ ಜನ ವಿಶ್ವಾಸ ಕಳೆದುಕೊಳ್ಳುವಂತಾಗಿದೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಪೊಲೀಸರನ್ನು ಕೇವಲ ಸಸ್ಪೆಂಡ್ ಮಾಡಿದರೆ ಸಾಲದು ಅವರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಗೃಹ ಸಚಿವ ಪರಮೇಶ್ವರ್ ಅವರು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.





