CM will resolve the MLAs' dissatisfaction: Minister G. Parameshwara
ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು ಹೊಲ ಮೇಯ್ದಂತಿದೆ.
ಈ ಬಗ್ಗೆ ವಿಧಾನಪರಿಷತ್ನಲ್ಲಿ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದು, ಮೂರು ವರ್ಷಗಳಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ ಎಂದಿದ್ದಾರೆ.
ಇದನ್ನು ಓದಿ: ಪಾರಿವಾಳದ ಮಲ-ಮೂತ್ರದಿಂದ ಜನರಿಗೆ ಉಸಿರಾಟದ ತೊಂದರೆ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ
ಗೃಹ ಸಚಿವರು ಅಂಕಿ-ಅಂಶಗಳ ಸಮೇತ ವಿವರಿಸುತ್ತಿದ್ದಂತೆ ಶಾಸಕರ ಶರವಣ ಆತಂಕ ವ್ಯಕ್ತಪಡಿಸಿದ್ದು, ಇದು ಬೇಲಿಯೇ ಎದ್ದು ಹೊಸ ಮೇಯ್ದ ಕಥೆಯಾಗಿದೆ. ರಕ್ಷಕರೇ ಭಕ್ಷಕರಾಗುತ್ತಿದ್ದಂತೆ ಇದೆ. ಈ ರೀತಿಯಾದರೆ ಪೊಲೀಸರ ಮೇಳೆ ಜನ ವಿಶ್ವಾಸ ಕಳೆದುಕೊಳ್ಳುವಂತಾಗಿದೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಪೊಲೀಸರನ್ನು ಕೇವಲ ಸಸ್ಪೆಂಡ್ ಮಾಡಿದರೆ ಸಾಲದು ಅವರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಗೃಹ ಸಚಿವ ಪರಮೇಶ್ವರ್ ಅವರು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…