A closeup shot of a pile of shiny gold coins and bars
ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ಮೌಲ್ಯದ 9 ಕೆ.ಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಗುರುವಾರ(ಜೂ.6) ಮಾಹಿತಿ ನೀಡಿದ ಡಿಆರ್ಐ ಅಧಿಕಾರಿಗಳು ಮಂಗಳವಾರ ಅಂದರೆ ಜೂನ್ 4 ರ ಬೆಳಿಗ್ಗೆ ಕಾರ್ಯಚರಣೆ ನಡೆಸುತ್ತಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಜೂನ್ 4 ರಂದು ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬರುತ್ತಿರುವ ಥಾಯ್ ಏರ್ವೇಸ್ ವಿಮಾನದಲ್ಲಿ ಚಿನ್ನ ಕಳ್ಳಸಾಗಣಿಗೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಮಾಹಿತಿ ಆಧಾರದ ಮೇಲೆ ತಪಸಣೆ ನಡೆಸಿದಾಗ ಹ್ಯಾಂಡ್ ಬ್ಯಾಗ್ನಲ್ಲಿ ಗಟ್ಟಿ ಹಾಗೂ ಕಚ್ಚಾ ರೂಪದಲ್ಲಿ 6.8 ಕೆ.ಜಿ ಚಿನ್ನ ಪತ್ತೆಯಾಗಿದೆ.
ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ ಹ್ಯಾಂಡ್ಬ್ಯಾಗ್ನಲ್ಲಿ ಸಿಕ್ಕ ದಾಖಲೆಯ ಆಧಾರದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 4.77 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.
ಇದಾದ ಕೆಲವೇ ಹೊತ್ತಿನಲ್ಲಿ ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಎಮಿರೇಟ್ಸ್ ವಿಮಾನದಲ್ಲಿ ತಪಾಸಣೆ ನಡೆಸಿದಾಗ ಗಟ್ಟಿ ರೂಪದ 2.18 ಕೆ.ಜಿ ಚಿನ್ನ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…