ರಾಜ್ಯ

ಕರ್ನಾಟಕದ 9 ಮಂದಿಗೆ ದೇಶದ ಅತ್ತ್ಯುನ್ನತ ಗೌರವ ಪ್ರಶಸ್ತಿ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಅತ್ಯುನ್ನತ ನಾಗರಿಕ ನಾಗರಿಕ ಸೇವಾ ಪದ್ಮ ಪ್ರಶಸ್ತಿ ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ. ಸಾಹಿತ್ಯ, ಶಿಕ್ಷಣ, ಕಲೆ, ವೈದ್ಯಕೀಯ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಕರ್ನಾಟಕದ 9 ಮಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾರತದ ಪದ್ಮ ಪುರಸ್ಕಾರಗಳಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ಕಲಾ ವಿಭಾಗದಲ್ಲಿ ಸಾಧನೆ ಮಾಡಿದ ಲಕ್ಷ್ಮೀ ನಾರಾಯಣ ಸುಬ್ರಹ್ಮಣ್ಯ ಅವರು ಭಾಜನರಾಗಿದ್ದಾರೆ.

ರಾಜ್ಯ ಇಬ್ಬರಿಗೆ ಪದ್ಮ ಭೂಷಣ ಪ್ರಶಸ್ತಿ ಲಭಿಸಿದ್ದು, ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಆನಂತ್‌ನಾಗ್‌ ಹಾಗೂ ಹಿರಿಯ ಪತ್ರಕರ್ತ ಎ. ಸೂರ್ಯಪ್ರಕಾಶ್‌ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

6 ಮಂದಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿದೆ. ಚಿತ್ರ ನಟ ಹಾಗೂ ನಿರ್ಮಾಪಕದ ರಘು ಹಾಸನ್‌, ಸಂಗೀತ ನಿರ್ದೇಶಕ ರಿಕಿ ಕೇಜ್‌, ಉದ್ಯಮಿ ಪ್ರಶಾಂತ್‌ ಪ್ರಕಾಶ್‌, ವೈದ್ಯೆ ಡಾ. ವಿಜಯಲಕ್ಷ್ಮಿ ದೇಶಮಾನೆ, ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗಟೇಕರ್‌, ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ ಇವರುಗಳಿಗೆ ಪ್ರಶಸ್ತಿ ಲಭಿಸಿದೆ.

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

11 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

12 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

12 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

12 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

13 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

22 hours ago