ರಾಜ್ಯ

ಕೆಎಸ್‌ಆರ್‌ಟಿಸಿ ಅಶ್ವಮೇಧ ಓಟಕ್ಕೆ 9 ಬಹುಮಾನ

ಬೆಂಗಳೂರು: ರಾಜ್ಯದ ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿದೆ.

6 ಆಡ್‌ವರ್ಲ್ಡ್‌ ಶೊಡೌನ್, ಚಿನ್ನದ ಪ್ರಶಸ್ತಿ, 2 ಗ್ರೊವ್‌ ಕೇರ್‌ ಇಂಡಿಯಾ ಹಾಗೂ 1 ಪಿಆರ್‌ಎಸ್‌ಐ ರಾಷ್ಟ್ರೀಯ ಪ್ರಶಸ್ತಿ 2024 ಸಿಕ್ಕಿದೆ.

6 ಆಡ್‌ವರ್ಲ್ಡ್‌ ಶೊಡೌನ್
1. ಅಶ್ವಮೇಧ ಕ್ಲಾಸಿಕ್‌ ಬಸ್ಸುಗಳ ಪರಿಚಯ-ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ
2. ಅಂಬಾರಿ ಉತ್ಸವ ಬಸ್‌ ಅತ್ಯುತ್ತಮ ಬ್ರಾಂಡ್‌ ಅನುಭವ
3. ಅಶ್ವಮೇಧ ಕ್ಲಾಸಿಕ್‌ ಬಸ್ಸುಗಳ-ಅತ್ಯುತ್ತಮ ಕಾರ್ಪೊರೇಟ್‌ ಸಂವಹನ ಹಾಗೂ ನಿರ್ವಹಣೆ
4.ಪಲ್ಲಕ್ಕಿ ಬಸ್ಸುಗಳ- ಅತ್ಯುತ್ತಮ ಗ್ರಾಹಕ ಸ್ವೀಕೃತ
5.ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್-‌ ಅತ್ಯುತ್ತಮ ಸಾರ್ವಜನಿಕ ಸಂಪರ್ಕ
6. ಅಶ್ವಮೇಧ ಕ್ಲಾಸಿಕ್‌ ಬಸ್ಸುಗಳು-ವರ್ಷದ ಅತ್ಯುತ್ತಮ ಬ್ರ್ಯಾಂಡ್‌

ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳು ಅನುಷ್ಟಾನಕ್ಕಾಗಿ ಗ್ರೋ ಕೇರ್‌ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿದೆ. ಪಿಆರ್ಎಸ್‌ಐ ರಾಷ್ಟ್ರೀಯ ಪ್ರಶಸ್ತಿಯನ್ನು ನಿಗಮಕ್ಕೆ ಕಾರ್ಪೋರೇಟ್‌ ಚಿತ್ರ ವಿಭಾಗದಲ್ಲಿ ಲಭಿಸಿರುತ್ತದೆ.

ನಿಗಮಕ್ಕೆ ಆಡ್‌ವರ್ಲ್ಡ್‌ ಪ್ರಶಸ್ತಿಗಳನ್ನು ಹೊಸದಿಲ್ಲಿಯ ಗ್ರೋ ಕೇರ್‌ ಇಂಡಿಯಾ ಪ್ರಶಸ್ತಿಗಳನ್ನು ಗೋವಾದಲ್ಲಿ ಹಾಗೂ ಪಿಆರ್‌ಎಸ್‌ಐ ಪ್ರಶಸ್ತಿಯನ್ನು ರಾಯಪುರದಲ್ಲಿ ಪ್ರದಾನ ಮಾಡಲಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಣರಾಜ್ಯೋತ್ಸವ ಸಂಭ್ರಮ : ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಧ್ವಜಾರೋಹಣ, ಪರೇಡ್‌ ಆರಂಭ

ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…

37 mins ago

ಫ್ಲೀಸ್. . ಬಸ್ ನಿಲ್ಲಿಸಿ ಸಾರ್. . !

ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್‌ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು,…

50 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ಗಾಂಧಿ, ಬುದ್ಧ, ಬಸವ ಅರ್ಜೆಂಟಾಗಿ ಬೇಕು

ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…

1 hour ago

ಸರ್ಕಾರ, ರಾಜ್ಯಪಾಲರ ಸಂಘರ್ಷ ; ನ್ಯಾಯಾಂಗ ಮಧ್ಯಪ್ರವೇಶ ಅಗತ್ಯ

ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…

1 hour ago

ದೇಶದ ಐಕ್ಯತೆ, ಪ್ರಗತಿಯ ಸಂಕೇತ-ಸಂವಿಧಾನ

ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…

1 hour ago

ದಿಲ್ಲಿ ಗಣರಾಜ್ಯೋತ್ಸವ | ಚಾ.ನಗರದ ಇಬ್ಬರು ಮಹಿಳೆಯರಿಗೆ ಆಹ್ವಾನ

ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…

2 hours ago