ಬೆಂಗಳೂರು: ರಾಜ್ಯದ ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿದೆ.
6 ಆಡ್ವರ್ಲ್ಡ್ ಶೊಡೌನ್, ಚಿನ್ನದ ಪ್ರಶಸ್ತಿ, 2 ಗ್ರೊವ್ ಕೇರ್ ಇಂಡಿಯಾ ಹಾಗೂ 1 ಪಿಆರ್ಎಸ್ಐ ರಾಷ್ಟ್ರೀಯ ಪ್ರಶಸ್ತಿ 2024 ಸಿಕ್ಕಿದೆ.
6 ಆಡ್ವರ್ಲ್ಡ್ ಶೊಡೌನ್
1. ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯ-ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ
2. ಅಂಬಾರಿ ಉತ್ಸವ ಬಸ್ ಅತ್ಯುತ್ತಮ ಬ್ರಾಂಡ್ ಅನುಭವ
3. ಅಶ್ವಮೇಧ ಕ್ಲಾಸಿಕ್ ಬಸ್ಸುಗಳ-ಅತ್ಯುತ್ತಮ ಕಾರ್ಪೊರೇಟ್ ಸಂವಹನ ಹಾಗೂ ನಿರ್ವಹಣೆ
4.ಪಲ್ಲಕ್ಕಿ ಬಸ್ಸುಗಳ- ಅತ್ಯುತ್ತಮ ಗ್ರಾಹಕ ಸ್ವೀಕೃತ
5.ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್- ಅತ್ಯುತ್ತಮ ಸಾರ್ವಜನಿಕ ಸಂಪರ್ಕ
6. ಅಶ್ವಮೇಧ ಕ್ಲಾಸಿಕ್ ಬಸ್ಸುಗಳು-ವರ್ಷದ ಅತ್ಯುತ್ತಮ ಬ್ರ್ಯಾಂಡ್
ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳು ಅನುಷ್ಟಾನಕ್ಕಾಗಿ ಗ್ರೋ ಕೇರ್ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿದೆ. ಪಿಆರ್ಎಸ್ಐ ರಾಷ್ಟ್ರೀಯ ಪ್ರಶಸ್ತಿಯನ್ನು ನಿಗಮಕ್ಕೆ ಕಾರ್ಪೋರೇಟ್ ಚಿತ್ರ ವಿಭಾಗದಲ್ಲಿ ಲಭಿಸಿರುತ್ತದೆ.
ನಿಗಮಕ್ಕೆ ಆಡ್ವರ್ಲ್ಡ್ ಪ್ರಶಸ್ತಿಗಳನ್ನು ಹೊಸದಿಲ್ಲಿಯ ಗ್ರೋ ಕೇರ್ ಇಂಡಿಯಾ ಪ್ರಶಸ್ತಿಗಳನ್ನು ಗೋವಾದಲ್ಲಿ ಹಾಗೂ ಪಿಆರ್ಎಸ್ಐ ಪ್ರಶಸ್ತಿಯನ್ನು ರಾಯಪುರದಲ್ಲಿ ಪ್ರದಾನ ಮಾಡಲಾಯಿತು.
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್ಗಳು; ಮಹಿಳೆಯರು, ವಯೋವೃದ್ಧರು,…
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…
ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…
ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…
ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…