ರಾಜ್ಯ

ಕೆಎಸ್‌ಆರ್‌ಟಿಸಿ ಅಶ್ವಮೇಧ ಓಟಕ್ಕೆ 9 ಬಹುಮಾನ

ಬೆಂಗಳೂರು: ರಾಜ್ಯದ ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿದೆ.

6 ಆಡ್‌ವರ್ಲ್ಡ್‌ ಶೊಡೌನ್, ಚಿನ್ನದ ಪ್ರಶಸ್ತಿ, 2 ಗ್ರೊವ್‌ ಕೇರ್‌ ಇಂಡಿಯಾ ಹಾಗೂ 1 ಪಿಆರ್‌ಎಸ್‌ಐ ರಾಷ್ಟ್ರೀಯ ಪ್ರಶಸ್ತಿ 2024 ಸಿಕ್ಕಿದೆ.

6 ಆಡ್‌ವರ್ಲ್ಡ್‌ ಶೊಡೌನ್
1. ಅಶ್ವಮೇಧ ಕ್ಲಾಸಿಕ್‌ ಬಸ್ಸುಗಳ ಪರಿಚಯ-ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ
2. ಅಂಬಾರಿ ಉತ್ಸವ ಬಸ್‌ ಅತ್ಯುತ್ತಮ ಬ್ರಾಂಡ್‌ ಅನುಭವ
3. ಅಶ್ವಮೇಧ ಕ್ಲಾಸಿಕ್‌ ಬಸ್ಸುಗಳ-ಅತ್ಯುತ್ತಮ ಕಾರ್ಪೊರೇಟ್‌ ಸಂವಹನ ಹಾಗೂ ನಿರ್ವಹಣೆ
4.ಪಲ್ಲಕ್ಕಿ ಬಸ್ಸುಗಳ- ಅತ್ಯುತ್ತಮ ಗ್ರಾಹಕ ಸ್ವೀಕೃತ
5.ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್-‌ ಅತ್ಯುತ್ತಮ ಸಾರ್ವಜನಿಕ ಸಂಪರ್ಕ
6. ಅಶ್ವಮೇಧ ಕ್ಲಾಸಿಕ್‌ ಬಸ್ಸುಗಳು-ವರ್ಷದ ಅತ್ಯುತ್ತಮ ಬ್ರ್ಯಾಂಡ್‌

ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳು ಅನುಷ್ಟಾನಕ್ಕಾಗಿ ಗ್ರೋ ಕೇರ್‌ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿದೆ. ಪಿಆರ್ಎಸ್‌ಐ ರಾಷ್ಟ್ರೀಯ ಪ್ರಶಸ್ತಿಯನ್ನು ನಿಗಮಕ್ಕೆ ಕಾರ್ಪೋರೇಟ್‌ ಚಿತ್ರ ವಿಭಾಗದಲ್ಲಿ ಲಭಿಸಿರುತ್ತದೆ.

ನಿಗಮಕ್ಕೆ ಆಡ್‌ವರ್ಲ್ಡ್‌ ಪ್ರಶಸ್ತಿಗಳನ್ನು ಹೊಸದಿಲ್ಲಿಯ ಗ್ರೋ ಕೇರ್‌ ಇಂಡಿಯಾ ಪ್ರಶಸ್ತಿಗಳನ್ನು ಗೋವಾದಲ್ಲಿ ಹಾಗೂ ಪಿಆರ್‌ಎಸ್‌ಐ ಪ್ರಶಸ್ತಿಯನ್ನು ರಾಯಪುರದಲ್ಲಿ ಪ್ರದಾನ ಮಾಡಲಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago