ರಾಜ್ಯ

ರಾಜ್ಯದಲ್ಲಿ 90ಸಾವಿರ ನಕಲಿ ಕಾರ್ಮಿಕರ ಕಾರ್ಡ್‌ ಪತ್ತೆ!

ಬೆಂಗಳೂರು: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆಯಾಗಿದೆ. ಬೀದರ್ ನಲ್ಲಿ ಬರೋಬ್ಬರಿ 26,545 ಕಾರ್ಡ್ ಗಳು ಪತ್ತೆಯಾಗಿದ್ದು, ಅನರ್ಹ ನೋಂದಣಿ ಪತ್ತೆ ಮಾಡಿ ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರ ಕಾರ್ಡ್ ಗಳನ್ನು ನೀಡಲಾಗುತ್ತಿದ್ದು, ಸೌಲಭ್ಯ ಪಡೆಯಲು ಅನರ್ಹರು ಕೂಡ ಕಾರ್ಡ್ ಪಡೆದುಕೊಂಡಿದ್ದಾರೆ.

ಸರ್ಕಾರ 3 ವರ್ಷದಿಂದ ನೋಂದಣಿ ಮಾಡಿಸಿರುವ 32,77,399 ಕಾರ್ಮಿಕರ ಕಾರ್ಡ್ ಗಳಲ್ಲಿ 90,091 ಕಾರ್ಡ್ ಗಳು ನಕಲಿಯಾಗಿದ್ದು, ಅವುಗಳನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಕಾರ್ಮಿಕರಲ್ಲದವರು ಕೂಡ ಕಾರ್ಡ್ ಪಡೆದುಕೊಂಡಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕರ್ನಾಟಕ ನಿಯಮಕ್ಕೆ ತಿದ್ದುಪಡಿ ತಂದಿದ್ದು, ನಿಯಮದ ಅನ್ವಯ ಅರ್ಹತಾ ಮಾನದಂಡ ಪೂರೈಸದ ಕಾರ್ಮಿಕರ ನೋಂದಣಿ ರದ್ದುಪಡಿಸಲು ನೋಂದಣಿ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ಬೀದರ್ ನಲ್ಲಿ 26545, ಹುಬ್ಬಳ್ಳಿ ಉಪ ವಿಭಾಗ 1ರಲ್ಲಿ 17,119, ಬಾಗಲಕೋಟೆ, ಚಿತ್ರದುರ್ಗ, ಶಿವಮೊಗ್ಗ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಕಲಿ ಕಾರ್ಮಿಕರ ಕಾರ್ಡ್ ಪಡೆಯಲಾಗಿದೆ.

ಪರಿಶೀಲನೆ ನಡೆಸಿ ಕಾರ್ಡ್ ರದ್ದುಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸೌಲಭ್ಯ ಪಡೆಯಲು ಯತ್ನಿಸಿದ ಅನರ್ಹರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಹೇಳಲಾಗಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

47 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

48 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

50 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

51 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

56 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago