ರಾಜ್ಯ

ರಾಜ್ಯದಲ್ಲಿ 90ಸಾವಿರ ನಕಲಿ ಕಾರ್ಮಿಕರ ಕಾರ್ಡ್‌ ಪತ್ತೆ!

ಬೆಂಗಳೂರು: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆಯಾಗಿದೆ. ಬೀದರ್ ನಲ್ಲಿ ಬರೋಬ್ಬರಿ 26,545 ಕಾರ್ಡ್ ಗಳು ಪತ್ತೆಯಾಗಿದ್ದು, ಅನರ್ಹ ನೋಂದಣಿ ಪತ್ತೆ ಮಾಡಿ ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರ ಕಾರ್ಡ್ ಗಳನ್ನು ನೀಡಲಾಗುತ್ತಿದ್ದು, ಸೌಲಭ್ಯ ಪಡೆಯಲು ಅನರ್ಹರು ಕೂಡ ಕಾರ್ಡ್ ಪಡೆದುಕೊಂಡಿದ್ದಾರೆ.

ಸರ್ಕಾರ 3 ವರ್ಷದಿಂದ ನೋಂದಣಿ ಮಾಡಿಸಿರುವ 32,77,399 ಕಾರ್ಮಿಕರ ಕಾರ್ಡ್ ಗಳಲ್ಲಿ 90,091 ಕಾರ್ಡ್ ಗಳು ನಕಲಿಯಾಗಿದ್ದು, ಅವುಗಳನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಕಾರ್ಮಿಕರಲ್ಲದವರು ಕೂಡ ಕಾರ್ಡ್ ಪಡೆದುಕೊಂಡಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕರ್ನಾಟಕ ನಿಯಮಕ್ಕೆ ತಿದ್ದುಪಡಿ ತಂದಿದ್ದು, ನಿಯಮದ ಅನ್ವಯ ಅರ್ಹತಾ ಮಾನದಂಡ ಪೂರೈಸದ ಕಾರ್ಮಿಕರ ನೋಂದಣಿ ರದ್ದುಪಡಿಸಲು ನೋಂದಣಿ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ಬೀದರ್ ನಲ್ಲಿ 26545, ಹುಬ್ಬಳ್ಳಿ ಉಪ ವಿಭಾಗ 1ರಲ್ಲಿ 17,119, ಬಾಗಲಕೋಟೆ, ಚಿತ್ರದುರ್ಗ, ಶಿವಮೊಗ್ಗ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಕಲಿ ಕಾರ್ಮಿಕರ ಕಾರ್ಡ್ ಪಡೆಯಲಾಗಿದೆ.

ಪರಿಶೀಲನೆ ನಡೆಸಿ ಕಾರ್ಡ್ ರದ್ದುಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸೌಲಭ್ಯ ಪಡೆಯಲು ಯತ್ನಿಸಿದ ಅನರ್ಹರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಹೇಳಲಾಗಿದೆ.

andolanait

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

3 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

3 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

3 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

3 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

3 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

3 hours ago