ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ.
ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್(ವಿದ್ಯುತ್), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ.
ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು.
ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು. ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್ ಪ್ರಕಟಣೆ ತಿಳಿಸಿದೆ.
ಕೋಟ್:
“ರಾಜ್ಯಾದ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ವಿದ್ಯುತ್ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು”.
– ಕೆ.ಜೆ ಜಾರ್ಜ್, ಇಂಧನ ಸಚಿವ
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…