ರಾಜ್ಯ

ಕೆಪಿಟಿಸಿಎಲ್‌ನಲ್ಲಿ 902 ಹುದ್ದೆಗಳ ನೇಮಕಕ್ಕೆ ಆದೇಶ

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ.

ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್‌(ವಿದ್ಯುತ್‌), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ.

ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು.

ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು. ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್‌ ಪ್ರಕಟಣೆ ತಿಳಿಸಿದೆ.

ಕೋಟ್‌:
“ರಾಜ್ಯಾದ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ವಿದ್ಯುತ್‌ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು”.
– ಕೆ.ಜೆ ಜಾರ್ಜ್‌, ಇಂಧನ ಸಚಿವ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

8 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago