ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ.
ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್(ವಿದ್ಯುತ್), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ.
ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು.
ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು. ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್ ಪ್ರಕಟಣೆ ತಿಳಿಸಿದೆ.
ಕೋಟ್:
“ರಾಜ್ಯಾದ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ವಿದ್ಯುತ್ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು”.
– ಕೆ.ಜೆ ಜಾರ್ಜ್, ಇಂಧನ ಸಚಿವ
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…