ರಾಜ್ಯ

ರಾಜ್ಯದಲ್ಲಿ 92 ಪಾಕ್‌ ಪ್ರಜೆಗಳು : 4 ಜನ ಮಾತ್ರ ತಕ್ಷಣ ದೇಶ ತೊರೆಯಬೇಕು ; ಗೃಹ ಸಚಿವಾಲಯ

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದ ದಾಳಿಯ ಬಳಿಕ ತಕ್ಕ ಪಾಠ ಕಲಿಸಲು ನಿರ್ಧರಿಸಿರುವ ಭಾರತ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗಿರುವ ವೀಸಾ ರದ್ದುಗೊಳಿಸಿದೆ.

ಪಾಕ್ ಪ್ರಜೆಗಳನ್ನು ಪತ್ತೆಹಚ್ಚಿ ವಾಪಸ್ ಕಳುಹಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ. ಕರ್ನಾಟಕದ ಮೈಸೂರು, ಉತ್ತರ ಕನ್ನಡ, ತುಮಕೂರು ಮತ್ತು ದಾವಣಗೆರೆ ಮುಂತಾದ ಕಡೆಗಳಲ್ಲಿ ಒಟ್ಟು 92 ಜನ ಪಾಕ್ ಪ್ರಜೆಗಳು ವಾಸವಿದ್ದಾರೆ ಎಂದು ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್​ ಇಲಾಖೆಯ ಕಾರ್ಯಾಚರಣೆಯಲ್ಲಿ ತಿಳಿದು ಬಂದಿದೆ. ಆದರೆ ಆ ಪೈಕಿ 4 ಜನ ಮಾತ್ರ ತಕ್ಷಣ ಭಾರತ ತೊರೆಯಬೇಕಿದೆ. ಇನ್ನುಳಿದ 88 ಪಾಕ್ ಪ್ರಜೆಗಳು ದೀರ್ಘಾವಧಿ ವೀಸಾ (LTV) ಹೊಂದಿದ್ದು, ಮುಂದಿನ ಆದೇಶದವರೆಗೂ ಕಾಯಬಹುದಾಗಿದೆ.

ಉತ್ತರ ಕನ್ನಡ ಜಿಲ್ಲೆಯೊಂದರಲ್ಲೇ ಪಾಕಿಸ್ತಾನ ಮೂಲದ 12 ಮಹಿಳೆಯರು ಹಾಗೂ ಮೂವರು ಮಕ್ಕಳು ಸಹಿತ ಒಟ್ಟು 15 ಜನ ವಾಸವಿದ್ದಾರೆ. ಉದ್ಯೋಗದ ನಿಮಿತ್ತ ಗಲ್ಫ್ ರಾಷ್ಟ್ರಗಳಿಗೆ ತೆರಳಿದ್ದವರ ಪೈಕಿ ಕೆಲವರು ಪಾಕ್ ಪ್ರಜೆಗಳನ್ನ ವಿವಾಹವಾಗಿ ಕರೆತಂದು ಜೀವನ ಮಾಡುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎಂ.ನಾರಾಯಣ್, ”ಕೇಂದ್ರ ಗೃಹ ಸಚಿವಾಲಯದ ಇತ್ತೀಚಿನ ಆದೇಶದ ಪ್ರಕಾರ ದೀರ್ಘಾವಧಿಯ ವೀಸಾ ಹೊಂದಿರುವವರು ಅದರಲ್ಲಿಯೂ ಪ್ರಮುಖವಾಗಿ ಭಾರತೀಯರನ್ನ ವಿವಾಹವಾಗಿ ಬಂದವರು ವಾಪಸಾಗಬೇಕಾದ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ ಮತ್ತು ದೀರ್ಘಾವಧಿ ವೀಸಾ ಹೊಂದಿರದ ಪಾಕ್ ಪ್ರಜೆಗಳನ್ನ ಕಡ್ಡಾಯವಾಗಿ ವಾಪಸ್ ಕಳಿಸುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಭಾರತೀಯ ವಲಸೆ ಕಾನೂನುಗಳ ಪಾಲನೆಯ ಉದ್ದೇಶದಿಂದ ಯಾವುದೇ ವಿದೇಶಿ ಪ್ರಜೆ ಭಾರತಕ್ಕೆ ಬಂದಾಗ ಪ್ರಾದೇಶಿಕ ನೋಂದಣಿ ಕೇಂದ್ರ (FRRO) ದಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. FRROದಲ್ಲಿ ನೋಂದಾಯಿಸಿಕೊಂಡಾಗ ವೀಸಾ ವಿಸ್ತರಣೆ, ಅಗತ್ಯ ಕಾನೂನು ಸೇವೆ, ಬೇರೆ ದೇಶಗಳಿಗೆ ಪ್ರಯಾಣದ ಸಂದರ್ಭದಲ್ಲಿ ಅನುಕೂಲವಾಗುತ್ತದೆ ಮತ್ತು ಅಗತ್ಯ ಸಂದರ್ಭಗಳಲ್ಲಿ ತನಿಖಾ ಸಂಸ್ಥೆಗಳು ವಿದೇಶಿಗರನ್ನ ಸಂಪರ್ಕಿಸಲು ನೆರವಾಗುತ್ತದೆ. ಸದ್ಯದ ಸಂದರ್ಭದಲ್ಲಿ ಅಂಥಹ ನೋಂದಾಯಿಸಿಸಲ್ಪಟ್ಟಿರುವ ಪಾಕ್ ಪ್ರಜೆಗಳ ಮಾಹಿತಿಯನ್ನ ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗಳಿಗೆ ನೀಡಲಾಗಿದ್ದು, ಗಡಿಪಾರು ಪ್ರಕ್ರಿಯೆ ನಡೆಸಲಾಗುತ್ತಿದೆ.

ಗಡಿಪಾರು ಪ್ರಕ್ರಿಯೆ ಹೇಗೆ: ಪ್ರಾದೇಶಿಕ ನೋಂದಣಿ ಕೇಂದ್ರ (FRRO) ದಲ್ಲಿ ನೋಂದಾಯಿಸಲ್ಪಟ್ಟಿರುವ ಪಾಕ್ ಪ್ರಜೆಗಳ ಕುರಿತು ಈಗಾಗಲೇ ಆಯಾ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ. ಅದರನ್ವಯ ಆಯಾ ಜಿಲ್ಲೆಗಳಲ್ಲಿರುವ ಪಾಕ್ ಪ್ರಜೆಗಳು ಭಾರತ ತೊರೆಯಬೇಕಿದೆ. ನೋಂದಾಯಿಸಲ್ಪಡದ ಹಾಗೂ ಅನಧಿಕೃತವಾಗಿ ನೆಲೆಸಿರುವವರನ್ನ ಸ್ಥಳಿಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ಬಂಧನ ಕೇಂದ್ರದಲ್ಲಿರಿಸುತ್ತಾರೆ. ನಂತರ ರಾಜ್ಯ ಗೃಹ ಇಲಾಖೆಯಿಂದ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಲಾಗುತ್ತದೆ.

ಕೇಂದ್ರ ಗೃಹ ಸಚಿವಾಲಯದ ಮೂಲಕ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗುತ್ತದೆ. ಬಳಿಕ ರಾಯಭಾರ ಕಚೇರಿಯ ಅಧಿಕಾರಿಗಳು ವೆರಿಫಿಕೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ಪ್ರಜೆಗಳನ್ನ ವಾಪಾಸ್ ಕಳಿಸಬೇಕಾಗುತ್ತದೆ.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

2 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

2 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

2 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

3 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

3 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

4 hours ago