ರಾಜ್ಯ

ರಾಜ್ಯದಲ್ಲಿ 92 ಪಾಕ್‌ ಪ್ರಜೆಗಳು : 4 ಜನ ಮಾತ್ರ ತಕ್ಷಣ ದೇಶ ತೊರೆಯಬೇಕು ; ಗೃಹ ಸಚಿವಾಲಯ

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದ ದಾಳಿಯ ಬಳಿಕ ತಕ್ಕ ಪಾಠ ಕಲಿಸಲು ನಿರ್ಧರಿಸಿರುವ ಭಾರತ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗಿರುವ ವೀಸಾ ರದ್ದುಗೊಳಿಸಿದೆ.

ಪಾಕ್ ಪ್ರಜೆಗಳನ್ನು ಪತ್ತೆಹಚ್ಚಿ ವಾಪಸ್ ಕಳುಹಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ. ಕರ್ನಾಟಕದ ಮೈಸೂರು, ಉತ್ತರ ಕನ್ನಡ, ತುಮಕೂರು ಮತ್ತು ದಾವಣಗೆರೆ ಮುಂತಾದ ಕಡೆಗಳಲ್ಲಿ ಒಟ್ಟು 92 ಜನ ಪಾಕ್ ಪ್ರಜೆಗಳು ವಾಸವಿದ್ದಾರೆ ಎಂದು ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್​ ಇಲಾಖೆಯ ಕಾರ್ಯಾಚರಣೆಯಲ್ಲಿ ತಿಳಿದು ಬಂದಿದೆ. ಆದರೆ ಆ ಪೈಕಿ 4 ಜನ ಮಾತ್ರ ತಕ್ಷಣ ಭಾರತ ತೊರೆಯಬೇಕಿದೆ. ಇನ್ನುಳಿದ 88 ಪಾಕ್ ಪ್ರಜೆಗಳು ದೀರ್ಘಾವಧಿ ವೀಸಾ (LTV) ಹೊಂದಿದ್ದು, ಮುಂದಿನ ಆದೇಶದವರೆಗೂ ಕಾಯಬಹುದಾಗಿದೆ.

ಉತ್ತರ ಕನ್ನಡ ಜಿಲ್ಲೆಯೊಂದರಲ್ಲೇ ಪಾಕಿಸ್ತಾನ ಮೂಲದ 12 ಮಹಿಳೆಯರು ಹಾಗೂ ಮೂವರು ಮಕ್ಕಳು ಸಹಿತ ಒಟ್ಟು 15 ಜನ ವಾಸವಿದ್ದಾರೆ. ಉದ್ಯೋಗದ ನಿಮಿತ್ತ ಗಲ್ಫ್ ರಾಷ್ಟ್ರಗಳಿಗೆ ತೆರಳಿದ್ದವರ ಪೈಕಿ ಕೆಲವರು ಪಾಕ್ ಪ್ರಜೆಗಳನ್ನ ವಿವಾಹವಾಗಿ ಕರೆತಂದು ಜೀವನ ಮಾಡುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎಂ.ನಾರಾಯಣ್, ”ಕೇಂದ್ರ ಗೃಹ ಸಚಿವಾಲಯದ ಇತ್ತೀಚಿನ ಆದೇಶದ ಪ್ರಕಾರ ದೀರ್ಘಾವಧಿಯ ವೀಸಾ ಹೊಂದಿರುವವರು ಅದರಲ್ಲಿಯೂ ಪ್ರಮುಖವಾಗಿ ಭಾರತೀಯರನ್ನ ವಿವಾಹವಾಗಿ ಬಂದವರು ವಾಪಸಾಗಬೇಕಾದ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ ಮತ್ತು ದೀರ್ಘಾವಧಿ ವೀಸಾ ಹೊಂದಿರದ ಪಾಕ್ ಪ್ರಜೆಗಳನ್ನ ಕಡ್ಡಾಯವಾಗಿ ವಾಪಸ್ ಕಳಿಸುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಭಾರತೀಯ ವಲಸೆ ಕಾನೂನುಗಳ ಪಾಲನೆಯ ಉದ್ದೇಶದಿಂದ ಯಾವುದೇ ವಿದೇಶಿ ಪ್ರಜೆ ಭಾರತಕ್ಕೆ ಬಂದಾಗ ಪ್ರಾದೇಶಿಕ ನೋಂದಣಿ ಕೇಂದ್ರ (FRRO) ದಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. FRROದಲ್ಲಿ ನೋಂದಾಯಿಸಿಕೊಂಡಾಗ ವೀಸಾ ವಿಸ್ತರಣೆ, ಅಗತ್ಯ ಕಾನೂನು ಸೇವೆ, ಬೇರೆ ದೇಶಗಳಿಗೆ ಪ್ರಯಾಣದ ಸಂದರ್ಭದಲ್ಲಿ ಅನುಕೂಲವಾಗುತ್ತದೆ ಮತ್ತು ಅಗತ್ಯ ಸಂದರ್ಭಗಳಲ್ಲಿ ತನಿಖಾ ಸಂಸ್ಥೆಗಳು ವಿದೇಶಿಗರನ್ನ ಸಂಪರ್ಕಿಸಲು ನೆರವಾಗುತ್ತದೆ. ಸದ್ಯದ ಸಂದರ್ಭದಲ್ಲಿ ಅಂಥಹ ನೋಂದಾಯಿಸಿಸಲ್ಪಟ್ಟಿರುವ ಪಾಕ್ ಪ್ರಜೆಗಳ ಮಾಹಿತಿಯನ್ನ ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗಳಿಗೆ ನೀಡಲಾಗಿದ್ದು, ಗಡಿಪಾರು ಪ್ರಕ್ರಿಯೆ ನಡೆಸಲಾಗುತ್ತಿದೆ.

ಗಡಿಪಾರು ಪ್ರಕ್ರಿಯೆ ಹೇಗೆ: ಪ್ರಾದೇಶಿಕ ನೋಂದಣಿ ಕೇಂದ್ರ (FRRO) ದಲ್ಲಿ ನೋಂದಾಯಿಸಲ್ಪಟ್ಟಿರುವ ಪಾಕ್ ಪ್ರಜೆಗಳ ಕುರಿತು ಈಗಾಗಲೇ ಆಯಾ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ. ಅದರನ್ವಯ ಆಯಾ ಜಿಲ್ಲೆಗಳಲ್ಲಿರುವ ಪಾಕ್ ಪ್ರಜೆಗಳು ಭಾರತ ತೊರೆಯಬೇಕಿದೆ. ನೋಂದಾಯಿಸಲ್ಪಡದ ಹಾಗೂ ಅನಧಿಕೃತವಾಗಿ ನೆಲೆಸಿರುವವರನ್ನ ಸ್ಥಳಿಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ಬಂಧನ ಕೇಂದ್ರದಲ್ಲಿರಿಸುತ್ತಾರೆ. ನಂತರ ರಾಜ್ಯ ಗೃಹ ಇಲಾಖೆಯಿಂದ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಲಾಗುತ್ತದೆ.

ಕೇಂದ್ರ ಗೃಹ ಸಚಿವಾಲಯದ ಮೂಲಕ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗುತ್ತದೆ. ಬಳಿಕ ರಾಯಭಾರ ಕಚೇರಿಯ ಅಧಿಕಾರಿಗಳು ವೆರಿಫಿಕೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ಪ್ರಜೆಗಳನ್ನ ವಾಪಾಸ್ ಕಳಿಸಬೇಕಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

4 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

4 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

4 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

4 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

4 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

4 hours ago