suicide concept. noose with shadow on dark wall backgroun
ಬೆಂಗಳೂರು: ಉಚಿತ ವಿದ್ಯುತ್, ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ, ಕೃಷಿ, ತೋಟಗಾರಿಕೆ, ರೈಷೆ ಹಾಗೂ ಪಶುಪಾಲನೆ ಇಲಾಖೆಗಳ ಮೂಲಕ ಸಹಾಯಧನ, ರಿಯಾಯಿತಿ ನೀಡುವ ಹಲವು ಯೋಜನೆಗಳು ಜಾರಿಯಲ್ಲಿದ್ದರೂ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ನಿಂತಿಲ್ಲ.
ಅಲ್ಲದೆ, ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರ ನೆರವಿಗೆ ಧಾವಿಸಿದೆ. ಆದರೂ ಕಳೆದೊಂದು ವರ್ಷದ ಅವಧಿಯಲ್ಲೇ ರಾಜ್ಯದಲ್ಲಿ 981 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಬಾಧೆ, ಬೆಳೆನಷ್ಟ ಮೊದಲಾದ ಕಾರಣಗಳಿಗೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಭ್ಯವಿರುವ ಮಾಹಿತಿ ಪ್ರಕಾರ 2024ರ ಏಪ್ರಿಲ್ ಒಂದರಿಂದ ಮೇ 2025ರವರೆಗೆ ರಾಜ್ಯದಲ್ಲಿ 981 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಸರ್ಕಾರದಿಂದ 807 ಪ್ರಕರಣಗಳಲ್ಲಿ ಮೃತ ರೈತರ ಕುಟುಂಬಗಳಿಗೆ ಪರಿಹಾರ ಒದಗಿಸಲಾಗಿದೆ.
138 ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಿರಸ್ಕರಿಸಿದ್ದು, ಬೇರೆ ಕಾರಣಗಳಿಗೆ ಆತ್ಮಹತ್ಯೆಮಾಡಿಕೊಂಡ ಪ್ರಕರಣಗಳೆಂದು ಪರಿಗಣಿಸಲಾಗಿದೆ. 825 ಪ್ರಕರಣಗಳನ್ನು ಅರ್ಹವೆಂದು ಪರಿಗಣಿಸಲಾಗಿದೆ. ಇನ್ನೂ 18 ಪ್ರಕರಣಗಳಿಗೆ ಸರ್ಕಾರದಿಂದ ಪರಿಹಾರ ನೀಡಬೇಕಿದೆ.
ಈ ಅವಧಿಯಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಹಾವೇರಿ ಜಿಲ್ಲೆಯಲ್ಲಿದ್ದರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಬ್ಬ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 21 ಜಿಲ್ಲೆಯಲ್ಲಿ ಹತ್ತಕ್ಕಿಂತ ಹೆಚ್ಚು ಹಾಗೂ ಆರು ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾವೇರಿ -128, ಕಲಬುರಗಿ- 82, ಮೈಸೂರು-73, ಧಾರವಾಡ-72, ಬೆಳಗಾವಿ-71, ಹಾಸನ- 47, ಬೀದರ್-45, ಶಿವಮೊಗ್ಗ-45, ಗದಗ-44, ಯಾದಗಿರಿ-43, ದಾವಣಗೆರೆ-42, ಚಿಕ್ಕಮಗಳೂರು-39, ಮಂಡ್ಯ-39, ಬಾಗಲಕೋಟೆ-35, ಚಿತ್ರದುರ್ಗ-34, ರಾಯಚೂರು-26, ಕೊಪ್ಪಳ-25, ವಿಜಯಪುರ-23, ವಿಜಯನಗರ, ತುಮಕೂರು-17, ಉತ್ತರ ಕನ್ನಡ-14 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…