suicide concept. noose with shadow on dark wall backgroun
ಬೆಂಗಳೂರು: ಉಚಿತ ವಿದ್ಯುತ್, ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ, ಕೃಷಿ, ತೋಟಗಾರಿಕೆ, ರೈಷೆ ಹಾಗೂ ಪಶುಪಾಲನೆ ಇಲಾಖೆಗಳ ಮೂಲಕ ಸಹಾಯಧನ, ರಿಯಾಯಿತಿ ನೀಡುವ ಹಲವು ಯೋಜನೆಗಳು ಜಾರಿಯಲ್ಲಿದ್ದರೂ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ನಿಂತಿಲ್ಲ.
ಅಲ್ಲದೆ, ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರ ನೆರವಿಗೆ ಧಾವಿಸಿದೆ. ಆದರೂ ಕಳೆದೊಂದು ವರ್ಷದ ಅವಧಿಯಲ್ಲೇ ರಾಜ್ಯದಲ್ಲಿ 981 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಬಾಧೆ, ಬೆಳೆನಷ್ಟ ಮೊದಲಾದ ಕಾರಣಗಳಿಗೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಭ್ಯವಿರುವ ಮಾಹಿತಿ ಪ್ರಕಾರ 2024ರ ಏಪ್ರಿಲ್ ಒಂದರಿಂದ ಮೇ 2025ರವರೆಗೆ ರಾಜ್ಯದಲ್ಲಿ 981 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಸರ್ಕಾರದಿಂದ 807 ಪ್ರಕರಣಗಳಲ್ಲಿ ಮೃತ ರೈತರ ಕುಟುಂಬಗಳಿಗೆ ಪರಿಹಾರ ಒದಗಿಸಲಾಗಿದೆ.
138 ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಿರಸ್ಕರಿಸಿದ್ದು, ಬೇರೆ ಕಾರಣಗಳಿಗೆ ಆತ್ಮಹತ್ಯೆಮಾಡಿಕೊಂಡ ಪ್ರಕರಣಗಳೆಂದು ಪರಿಗಣಿಸಲಾಗಿದೆ. 825 ಪ್ರಕರಣಗಳನ್ನು ಅರ್ಹವೆಂದು ಪರಿಗಣಿಸಲಾಗಿದೆ. ಇನ್ನೂ 18 ಪ್ರಕರಣಗಳಿಗೆ ಸರ್ಕಾರದಿಂದ ಪರಿಹಾರ ನೀಡಬೇಕಿದೆ.
ಈ ಅವಧಿಯಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಹಾವೇರಿ ಜಿಲ್ಲೆಯಲ್ಲಿದ್ದರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಬ್ಬ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 21 ಜಿಲ್ಲೆಯಲ್ಲಿ ಹತ್ತಕ್ಕಿಂತ ಹೆಚ್ಚು ಹಾಗೂ ಆರು ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾವೇರಿ -128, ಕಲಬುರಗಿ- 82, ಮೈಸೂರು-73, ಧಾರವಾಡ-72, ಬೆಳಗಾವಿ-71, ಹಾಸನ- 47, ಬೀದರ್-45, ಶಿವಮೊಗ್ಗ-45, ಗದಗ-44, ಯಾದಗಿರಿ-43, ದಾವಣಗೆರೆ-42, ಚಿಕ್ಕಮಗಳೂರು-39, ಮಂಡ್ಯ-39, ಬಾಗಲಕೋಟೆ-35, ಚಿತ್ರದುರ್ಗ-34, ರಾಯಚೂರು-26, ಕೊಪ್ಪಳ-25, ವಿಜಯಪುರ-23, ವಿಜಯನಗರ, ತುಮಕೂರು-17, ಉತ್ತರ ಕನ್ನಡ-14 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…