ಬೆಂಗಳೂರು: ಕೇರಳದಲ್ಲಿ ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ದೊಡ್ಡ ಪ್ರಯೋಗ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಇಂದು (ಮೇ.30) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ರಾಜರಾಜೇಶ್ವರಿ ದೇವಾಲಯದಲ್ಲಿ ಅಘೋರಿಗಳ ಮೂಲಕ ಶತ್ರು ಭೈರವಿ ಯಾಗ ನಡೆಸುತ್ತಿದ್ದಾರೆ. ಇದು ಶತ್ರು ಸಂಹಾರ ಪೂಜೆಯಾಗಿದೆ. ನಮ್ಮ ವಿರುದ್ಧ ಪಂಚಬಲಿ ಯಾಗ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಪೂಜೆ ಇವತ್ತು ಪ್ರಾರಂಭವಾಗಿದೆ. ಮಧ್ಯರಾತ್ರಿಯ ತನಕೆ ಈ ಪೂಜೆ ನಡೆಯುತ್ತದೆ. ಇದು ಶತ್ರು ಭೈರವಿ ಯಾಗ. 21 ಮೇಕೆ, 3 ಎಮ್ಮೆ, 28 ಕಪ್ಪು ಮೇಕೆ , 5 ಹಂದಿಯನ್ನು ಬಲಿ ಕೊಟ್ಟು ಅಘೋರಿಗಳ ಮೂಲಕ ಈ ಯಾಗ ನಡೆಸುತ್ತಿದ್ದಾರೆ. ಈ ಯಾಗ ಶತ್ರು ಸಂಹಾರದ ಭಾಗವಾಗಿದೆ. ಈ ಯಾಗ ನಡೆಸುತ್ತಿರುವವರು ಯಾರು ಎಂಬುದು ಕೂಡ ತಿಳಿದಿದೆ. ನಾವು ನಂಬಿದ ದೇವರೇ ನಮ್ಮನ್ನು ಕಾಪಾಡುತ್ತದೆ ಎಂದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…