ರಾಜ್ಯ

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣಕ್ಕೆ ಬ್ರೇಕ್‌ : ಮುಂದಿನ ಅಧಿವೇಶನದಲ್ಲಿ ಕಾಯಿದೆ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯದಲ್ಲಿ ನಕಲಿ ಸುದ್ದಿ, ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ಅಧಿವೇಶನದಲ್ಲಿ ಕಾಯಿದೆಯನ್ನು ಜಾರಿಗೊಳಿಸಲು ಸರ್ಕಾರ ಸಿದ್ದತೆ ನಡೆಸಿದೆ ಎನ್ನಲಾಗಿದೆ.

ಈ ಪೈಕಿ ಕೆಲವು ಕಾಯಿದೆಗಳು ವಿಪಕ್ಷ ಬಿಜೆಪಿಯನ್ನು ಸೈದ್ಧಾಂತಿಕವಾಗಿ ನಿಯಂತ್ರಿಸುವ ಉದ್ದೇಶ ಹೊಂದಿದೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸರಣಿ ಕೊಲೆಗಳ ಬಳಿಕ ದ್ವೇಷ ಭಾಷಣ, ಸುಳ್ಳು ಸುದ್ದಿ ನಿಯಂತ್ರಣ ಕಾಯಿದೆ ಜಾರಿಗೊಳಿಸಬೇಕೆಂಬ ಆಗ್ರಹ ವ್ಯಕ್ತವಾಗಿತ್ತು. ಕಾಂಗ್ರೆಸ್ ಶಾಸಕರು ಹಾಗೂ ಬೆಂಬಲಿಗರು ಈ ಬಗ್ಗೆ ಒತ್ತಾಯಿಸಿದ್ದರು. ಅಗತ್ಯ ಬಿದ್ದರೆ ದ್ವೇಷ ಭಾಷಣ ನಿಯಂತ್ರಣಕ್ಕೆ ಕಾನೂನು ತಿದ್ದುಪಡಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

ದ್ವೇಷ ಭಾಷಣ ಸಾಬೀತಾದರೆ 3 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ನಗದು ದಂಡ ವಿಧಿಸಲು ಅವಕಾಶ ಮಾಡಿಕೊಡುವಂಥ ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ (ಹೋರಾಟ, ತಡೆಗಟ್ಟುವಿಕೆ ಮತ್ತು ಶಿಕ್ಷೆ) ವಿಧೇಯಕ-205 ಕರಡನ್ನು ಕಾನೂನು ಇಲಾಖೆ ಸಿದ್ಧಪಡಿಸುತ್ತಿದೆ. ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗುತ್ತಿದೆ.

ಇದರಡಿ ಜಾತಿ, ಧರ್ಮ ಆಧರಿಸಿ ದ್ವೇಷ ಭಾಷಣ ಮಾಡುವುದು ಶಿಕ್ಷಾರ್ಹ ಅಪರಾಧವಾಗಲಿದೆ. ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಭಾಷೆ, ಅಂಗವೈಕಲ್ಯ ಬುಡಕಟ್ಟುವಿನ ಕುರಿತು ದ್ವೇಷ ಭಾಷಣ ಮಾಡುವಂತಿಲ್ಲ ಎಂಬುದನ್ನು ಕರಡಿನಲ್ಲಿ ಪ್ರಸ್ತಾಪಿಸಲಾಗಿದೆ. ಈಗಾಗಲೇ ಭಾರತೀಯ ನಾಗರಿಕ ದಂಡ ಸಂಹಿತೆಯಲ್ಲಿ ದ್ವೇಷ ಭಾಷಣ ನಿಷಿದ್ಧವಾದರೂ ಇದಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಲು ವಿಸ್ಕೃತವಾಗಿ ಕರಡು ಸಿದ್ಧಪಡಿಸಲಾಗಿದೆ ಎಂದು ಕಾನೂನು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಗೃಹ ಇಲಾಖೆ ನೀಡಿರುವ ಮಾಹಿತಿ ಪ್ರಕಾರ 2023 ರಿಂದ 2024 ವರೆಗೆ ರಾಜ್ಯದಲ್ಲಿ ಒಟ್ಟು 247 ಸುಳ್ಳು ಸುದ್ದಿ ಪ್ರಕರಣ ವರದಿಯಾಗಿವೆ. ಇವುಗಳನ್ನು ಜಿಲ್ಲಾ ಮಟ್ಟದಲ್ಲಿ ಸಾಮಾಜಿಕ ಜಾಲತಾಣಗಳ ಮಾನಿಟರಿಂಗ್ ಸೆಲ್‌ಗಳನ್ನು ತೆರೆಯಲಾಗಿದೆ. ಇದರ ಮೂಲಕ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲಾಗುತ್ತಿದೆ. ಗುಪ್ತ ಮಾಹಿತಿ ಸಿಬ್ಬಂದಿ ಹಾಗೂ ಬೀಟ್ ಸಿಬ್ಬಂದಿ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸದ್ಯ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡುವಲ್ಲಿ ವ್ಯಕ್ತಿ ತಪ್ಪಿತಸ್ಥರೆಂದು ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ಗಳವರೆಗೆ ದಂಡ ಅಥವಾ ಎರಡನ್ನೂ ವಿಧಿಸುವ ಬಗ್ಗೆ ರೂಪರೇಷ ಸಿದ್ಧವಾಗಿದೆ .ಅದೇನೇ ಇರಲಿ ಇತ್ತೀಚಿನ ದಿನಗಳಲ್ಲಿ ತಪ್ಪು ಸುದ್ದಿಗಳ ಹಾವಳಿ ಕೂಡ ಹೆಚ್ಚಾಗಿದ್ದು, ಜನರಿಗೆ ಯಾವುದು ಸತ್ಯ ಸುಳ್ಳು ಎನ್ನುವ ಗೊಂದಲವೂ ಕೂಡ ಹೆಚ್ಚಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಅಥವಾ ಪ್ರಕಟಣೆಗಳಲ್ಲಿ ತಪ್ಪು ಮಾಹಿತಿ ನೀಡಿದರೆ ಎರಡರಿಂದ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ. ಈ ಅಪರಾಧಗಳನ್ನು ಸಂಜ್ಞೇಯವೆಂದು ಪರಿಗಣಿಸಲಾಗುತ್ತದೆ. ಅಲ್ಲದೇ ಇದು ಜಾಮೀನು ರಹಿತ ಪ್ರಕರಣವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದು ಹಾಗೂ ದ್ವೇಷ ಭಾಷಣ ಮಾಡುವವರು ಎಚ್ಚರಿಕೆಯಿಂದ ಇರಬೇಕು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

7 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

9 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

10 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago